May 13, 2026
WhatsApp Image 2025-03-03 at 3.14.05 PM

ಬೆಳ್ತಂಗಡಿ: ನವ ವಿವಾಹಿತೆಯೋರ್ವರು ಬೆಂಗಳೂರಿನ ಸಂಬಂಧಿಕರ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ಮಹಿಳೆ ಪಡಂಗಡಿ ಗ್ರಾಮದ ಬದ್ಯಾರು ಬರಾಯ ಮನೆ ನಿವಾಸಿ ಪ್ರಕಾಶ್ ಅವರ ಪತ್ನಿ ಪೂಜಾಶ್ರೀ(23) ಎಂದು ಗುರುತಿಸಲಾಗಿದೆ.

ಮಾ.1ರಂದು ಪೂಜಾಶ್ರೀ ಬೆಂಗಳೂರಿನ ಸಂಬಂಧಿಕರ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೆಲಸ ಹುಡುಕುತ್ತಿದ್ದ ಪೂಜಾರನ್ನು ಪತಿ ಪ್ರಕಾಶ್ ಅವರು ಬೆಂಗಳೂರಿನಲ್ಲಿರುವ ತನ್ನ ಸಂಬಂಧಿಕರ ಮನೆಗೆ ಕಳುಹಿಸಿದ್ದರು. ಪ್ರಕಾಶ್ ಬದ್ಯಾರು ಬರಾಯದ ತಮ್ಮ ಮನೆಯಲ್ಲಿ ಕೃಷಿ ಕೆಲಸ ಮಾಡಿಕೊಂಡಿದ್ದರು. ಪೂಜಾ ಮೂಲತಃ ಕಣಿಯೂರು ಗ್ರಾಮದ ನಲ್ಲಿ ಬಾಕಿಮಾರು ಮನೆಯ ವಾರಿಜ ಹಾಗೂ ಸೇಸಪ್ಪ ಪೂಜಾರಿ ದಂಪತಿಯ ಪುತ್ರಿಯಾಗಿದ್ದು, 10 ತಿಂಗಳ ಹಿಂದೆ ಇವರ ವಿವಾಹವಾಗಿತ್ತು. ಪೂಜಾ ಸಾವಿನ ಬಗ್ಗೆ ಸಂಶಯವಿದೆ ಎಂದು ಹೆತ್ತವರು ಆರೋಪಿಸಿದ್ದಾರೆ. ಬೆಂಗಳೂರು ಜಾಲಹಳ್ಳಿ ಬಾಗಲಕುಂಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

About The Author

Leave a Reply