ಬಂಟ್ವಾಳ: ಕಾರಿಗೆ ಖಾಸಗಿ ಬಸ್ ಡಿಕ್ಕಿ ಹೊಡೆದು ಕಾರು ಚಾಲಕ ಗಂಭೀರವಾಗಿ ಗಾಯಗೊಂಡ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬಿಸಿರೋಡಿನ ಸರ್ಕಲ್ ಬಳಿ ನಡೆದಿದೆ. ಬಂಟ್ವಾಳ ಕನ್ಯಾನದ ವಿಷ್ಣು ಗ್ಯಾರೇಜ್ ಮಾಲಕ ವಿಶ್ವನಾಥ ಶೆಟ್ಟಿ ಗಾಯಗೊಂಡ ಕಾರು ಚಾಲಕ ಎಂದು ಗುರುತಿಸಲಾಗಿದೆ.
ಬಿಸಿರೋಡಿನ ಕಡೆಯಿಂದ ಮೆಲ್ಕಾರ್ ಕಡೆಗೆ ಕಾಂಕ್ರೀಟ್ ರಸ್ತೆಯಲ್ಲಿ ಹೋಗುತ್ತಿದ್ದ ವಿಶ್ವನಾಥ ಅವರ ಕಾರಿಗೆ ಮೆಲ್ಕಾರ್ ಪಾಣೆಮಂಗಳೂರು ಕಡೆಯಿಂದ ಬರುತ್ತಿದ್ದ ಸೆಲಿನಾ ಬಸ್ ವಿರುದ್ಧ ದಿಕ್ಕಿನಲ್ಲಿ ಬಂದು ಡಿಕ್ಕಿ ಹೊಡೆದಿದೆ.ಬಸ್ ಚಾಲಕನ ನಿಯಮ ಮೀರಿದ ಚಾಲನೆಯೇ ಘಟನೆಗೆ ಕಾರಣವಾಗಿದೆ ಎಂದು ಹೇಳಲಾಗಿದೆ.ಬಿಸಿರೋಡಿನಿಂದ ಮೆಲ್ಕಾರ್ ಕಡೆಗೆ ಹೋಗುವ ರಸ್ತೆಯಲ್ಲಿ ವಿರುದ್ಧ ದಿಕ್ಕಿನಲ್ಲಿ ಬಂದು ಕಾರಿಗೆ ಡಿಕ್ಕಿ ಹೊಡೆದಿದ್ದಾನೆ ಎಂದು ತಿಳಿಸಿದ್ದಾರೆ.ಘಟನೆಯಿಂದ ಕಾರು ಸಂಪೂರ್ಣ ಜಖಂಗೊಂಡಿದ್ದು ಕಾರು ಚಾಲಕ ಗಂಭೀರವಾಗಿ ಗಾಯಗೊಂಡಿದ್ದು, ಚಿಂತಾಜನಕ ಸ್ಥಿತಿಯಲ್ಲಿ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮಂಗಳೂರು: ಮಂಗಳೂರು ವಿವಿಯಲ್ಲಿ ಶನಿವಾರ 43ನೇ ವಾರ್ಷಿಕ ಘಟಿಕೋತ್ಸವ ನಡೆಯಲಿದ್ದು, ಈ ಬಾರಿಯೂ ಉದ್ಯಮಿಗಳೇ ಗೌರವ ಡಾಕ್ಟರೇಟ್ಗೆ ಆಯ್ಕೆಯಾಗಿದ್ದಾರೆ. ರಿಯಲ್ ಎಸ್ಟೇಟ್ ಉದ್ಯಮಿ ರೋಹನ್ ಮೊಂತೇರೋ, ಮುಂಬೈ…
ಶಿವಮೊಗ್ಗ: ನಿನ್ನೆ ರಾಗಿಗುಡ್ಡಕ್ಕೆ ಪುತ್ತೂರು ಮೂಲದ ಹಿಂದೂ ಫೈರ್ ಬ್ರಾಂಡ್ ಅರುಣ್ ಕುಮಾರ್ ಪುತ್ತಿಲ ಭೇಟಿ ನೀಡಿದ್ದರು. ಸಂತ್ರಸ್ತರನ್ನು ಭೇಟಿಯಾಗಿ ಮಾತನಾಡಿದ್ದರು. ಈ ವೇಳೆಯಲ್ಲಿ ಆಯುಧ ಪೂಜೆ…
ಜಿಲ್ಲೆಯ ವಿವಿಧ ಗ್ರಾ.ಪಂಚಾಯತಿಗೆ ಕಾರಣಾಂತರಗಳಿಂದ ತೆರವಾದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಅಭೂತಪೂರ್ವ ಜಯಗಳಿಸುವ ಮೂಲಕ ಕಾಂಗ್ರೇಸ್ ಸರಕಾರದ ಪಂಚ ಗ್ಯಾರಂಟಿ ಯೋಜನೆಗಳು ಗ್ರಾಮದ ಹಳ್ಳಿಯ ಪ್ರದೇಶದ…