ಹಾವೇರಿ : ಹಾವೇರಿಯಲ್ಲಿ ಸ್ವಾತಿ ಬ್ಯಾಡಗಿ ಎನ್ನುವ ಯುವತಿಯನ್ನು ಭೀಕರವಾಗಿ ಕೊಲೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲಗೇರಿ ಪೊಲೀಸರು ಇನ್ನಿಬ್ಬರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ಹಾಗಾಗಿ ಬಂಧಿತರ ಸಂಖ್ಯೆ ಇದೀಗ 3ಕ್ಕೆ ಏರಿಕೆಯಾಗಿದೆ.

ಕೊಲೆಯಾದ ಯುವತಿಯನ್ನು ಸ್ವಾತಿ ರಮೇಶ್ ಬ್ಯಾಡಗಿ (22) ಎಂದು ತಿಳಿಬಂದಿದೆ. ಈ ಒಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಮೊದಲು ಆರೋಪಿ ನಯಾಜ್ ನನ್ನು ಅರೆಸ್ಟ್ ಮಾಡಲಾಗಿದೆ. ಹತ್ಯೆ ಪ್ರಕರಣದಲ್ಲಿ ನಯಾಜ್ ಇರುವ ಅನುಮಾನ ವ್ಯಕ್ತವಾಗಿದೆ. ಮೃತ ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಮಾಸೂರು ಗ್ರಾಮದ ನಿವಾಸಿಯಾಗಿದ್ದು, ಆರೋಪಿ ನಯಾಜ್ ನನ್ನು ಹಲಗೇರಿ ಠಾಣೆ ಪೋಲಿಸರು ಅರೆಸ್ಟ್ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

ಇದೀಗ ಗಣಾಚಾರಿ ಹಾಗು ಮತ್ತೊರ್ವನನ್ನು ಅರೆಸ್ಟ್ ಮಾಡಿದ್ದಾರೆ. ಸ್ವಾತಿ ಮಾರ್ಚ್ 3ರಂದು ಇವರನ್ನು ಭೇಟಿಯಾಗಿದ್ದಳು. ಹಾವೇರಿ ಜಿಲ್ಲೆಯ ರಾಣಿಬೆನ್ನೂರು ತಾಲ್ಲೂಕು ಬಳಿ ಮೂವರನ್ನು ಭೇಟಿಯಾಗಿದ್ದಾಗ ಇವರ ಮಧ್ಯ ಜಗಳ ಆಗಿದೆ. ಈ ವೇಳೆ ಮೂವರು ಸ್ವಾತಿಯನ್ನು ಕೊಲೆ ಮಾಡಿ ತುಂಗಭದ್ರಾ ನದಿಯಲ್ಲಿ ಬಿಸಾಡಿರುವ ಅನುಮಾನ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಇದೀಗ ಆರೋಪಿಗಳಾದ ನಯಾಜ್, ಗಣಾಚಾರಿ ಹಾಗೂ ಮತ್ತೊರ್ವ ಆರೋಪಿಯನ್ನು ಹಲಗೇರಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ.

ಘಟನೆ ಹಿನ್ನೆಲೆ?

ಮಾರ್ಚ್ 3 ರಂದು ಸ್ವಾತಿ ರಮೇಶ್ ಬ್ಯಾಡಗಿ ಕಾಣೆಯಾಗಿದ್ದಳು. ಈ ಕುರಿತು ಸ್ವಾತಿ ಪೋಷಕರು ಮಿಸ್ಸಿಂಗ್ ದೂರು ದಾಖಲಿಸಿದ್ದರು. ಮಾರ್ಚ್ 6 ರಂದು ಸ್ವಾತಿಯ ಮೃತ ದೇಹ ಪತ್ತೆಯಾಗಿತ್ತು. ಹಾವೇರಿ ಜಿಲ್ಲೆಯ ರಾಣಿಬೆನ್ನೂರು ತಾಲೂಕಿನ ಪತ್ತೇಪೂರ ಗ್ರಾಮದ ತುಂಗಭದ್ರಾ ನದಿ ಬಳಿ ಶವ ಪತ್ತೆಯಾಗಿತ್ತು. ಬಳಿಕ ಪೋಸ್ಟ್ಮಾರ್ಟಂ ರಿಪೋರ್ಟ್ ನಲ್ಲಿ ಇದು ಆಕಸ್ಮಿಕ ಸಾವಲ್ಲ ಕೊಲೆಯಾಗಿದೆ ಎಂದು ತಿಳಿದು ಬಂದಿದೆ.

ಇದೀಗ ಕುಟುಂಬಸ್ಥರು ಲವ್ ಅಜಾದ್ ನಿಂದ ನಮ್ಮ ಮಗಳನ್ನು ಕಳೆದುಕೊಂಡಿದ್ದೇವೆ ಎಂದು ಮೃತ ಸ್ವಾತಿ ಪೋಷಕರು ಆರೋಪಿಸುತ್ತಿದ್ದಾರೆ. ಪೋಷಕರ ಆರೋಪದ ಪ್ರಕಾರ ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಮಾಸೂರು ಗ್ರಾಮದ ಸ್ವಾತಿ ಮುಸ್ಲಿಂ ಯುವಕನೊಂದಿಗೆ ಪ್ರೀತಿ ಪ್ರೇಮದಲ್ಲಿ ಬಿದಿದ್ದಳು.ಈ ಹಿನ್ನೆಲೆಯಲ್ಲಿ ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಓರ್ವ ಆರೋಪಿ ನಯಾಜ್ ಎನ್ನುವವನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಹಾಗಾಗಿ ಪೋಷಕರು ಇದು ಲವ್ ಜಹಾದ್ ಎಂದು ಗಂಭೀರವಾಗಿ ಆರೋಪಿಸಿದ್ದಾರೆ. ಫತ್ತೆಪುರ ಗ್ರಾಮದ ತುಂಗಭದ್ರಾ ನದಿ ಬಳಿ ಸ್ವಾತಿಯ ಶವ ಪತ್ತೆಯಾಗಿತ್ತು. ಹಾವೇರಿ ಜಿಲ್ಲೆಯ ರಾಣಿಬೆನ್ನೂರು ತಾಲೂಕಿನ ಪತ್ತೇಪೂರ ಗ್ರಾಮದಲ್ಲಿ ಶವ ಪತ್ತೆಯಾಗಿತ್ತು.