ಮಂಗಳೂರು: ವಿದ್ಯಾರ್ಥಿಗಳ ಹಕ್ಕುಗಳಿಗಾಗಿ ಎನ್‌ಎಸ್‌ಯುಐ ಹೋರಾಟ – ಎನ್‌ಎಸ್‌ಯುಐ ರಾಜ್ಯ ಪ್ರಧಾನ ಕಾರ್ಯದರ್ಶಿ ಅನ್ವಿತ್‌ ಕಟೀಲ್‌

ಮಂಗಳೂರು:  ಕಾಲೇಜುಗಳಲ್ಲಿ ವ್ಯಾಪಕವಾಗಿರುವ ಡ್ರಗ್ರ್‌, ರ್ಯಾಗಿಂಗ್‌ ಪಿಡುಗು ನಿರ್ಮೂಲನೆ ಸೇರಿದಂತೆ ವಿದ್ಯಾರ್ಥಿಗಳ ವಿವಿಧ ಸಮಸ್ಯೆ ನಿವಾರಣೆಗಾಗಿ ಹೆಲ್ವ್‌ಲೈನ್‌ (ಸಂಖ್ಯೆ: 7400840069) ಆರಂಭಿಸಲಾಗಿದೆ. ಕರೆ ಅಥವಾ ವಾಟ್ಸಪ್‌ ಮೂಲಕ ವಿದ್ಯಾರ್ಥಿಗಳು ಸಮಸ್ಯೆ ಹೇಳಿಕೊಳ್ಳಬಹುದು ಎಂದು. ಎನ್‌ಎಸ್‌ಯುಐ ರಾಜ್ಯ ಪ್ರಧಾನ ಕಾರ್ಯದರ್ಶಿ ಅನ್ವಿತ್‌ ಕಟೀಲ್‌ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಸ್ತುತ ಎನ್‌ಎಸ್‌ಯುಐ ವತಿಯಿಂದ ರಾಜ್ಯಾದ್ಯಂತ ವಿದ್ಯಾರ್ಥಿ ನ್ಯಾಯ ಯಾತ್ರೆ ಸಂಚರಿಸುತ್ತಿದ್ದು, 8 ಜಿಲ್ಲೆಗಳನ್ನು ಪೂರೈಸಿ 9ನೇ ಜಲ್ಲೆಯಾಗಿ ದಕ್ಷಿಣ ಕನ್ನಡಕ್ಕೆ ಆಗಮಿಸಿದೆ. ಈ ಸಂದರ್ಭ ವಿದ್ಯಾರ್ಥಿಗಳು ಈ ಸಂಖ್ಯೆಯ ಮೂಲಕ ತಮ್ಮ ಸಮಸ್ಯೆಗಳನ್ನು ಹೇಳಿಕೊಂಡರೆ. ಅವುಗಳನ್ನು ಬಗೆಹರಿಸಲು ಪ್ರಯತ್ನಿಸಲಾಗುವುದು. ಈಗಾಗಲೇ ಬಹಳಷ್ಟು ವಿದ್ಯಾರ್ಥಿಗಳು ಸಮಸ್ಯೆ ಹೇಳಿಕೊಂಡಿದ್ದಾರೆ ಎಂದು ಹೇಳಿದರು.

ಮೇಕ್‌-ಅಪ್‌ ಪರೀಕ್ಷೆಗೆ ಆಗ್ರಹ: ಪ್ರಸ್ತುತ ಪದವಿ ವಿದ್ಯಾರ್ಥಿಗಳು ಯಾವುದಾದರೂ ಪರೀಕ್ಷೆಯಲ್ಲಿ ಫೇಲಾದರೆ ಮರು ಪರೀಕ್ಷೆ ಬರೆಯಲು ಒಂದು ವರ್ಷ ಕಾಯಬೇಕು. ಇದರಿಂದ ರಾಜ್ಯದ ಕಾಲೇಜುಗಳಲ್ಲಿ ಡ್ರಾಪ್‌ಔಟ್‌ ಆಗುವವರ ಸಂಖ್ಯೆ ಹೆಚ್ಚಿದ. ಅಲ್ಲದೆ, ಕೊನೆ ಸೆಮಿಸ್ಟರ್‌ನಲ್ಲಿರುವ ವಿದ್ಯಾರ್ಥಿಗಳಿಗೆ ಸಮಸ್ಯೆಯಾಗುತ್ತಿದೆ. ಈ ಪದ್ಧತಿಯನ್ನು ಕೈಬಿಟ್ಟು ತಕ್ಷಣಾ ಮರು ಪರೀಕ್ಷೆ ನಡೆಸುವ ವ್ಯವಸ್ಥೆ ಜಾರಿಗೊಳಿಸುವಂತೆ ಸರ್ಕಾರಕ್ಕೆ ಮನವಿ ಮಾಡಲಾಗಿದ್ದು, ಸೂಕ್ತ. ಕ್ರಮದ ನಿರೀಕ್ಷೆಯಿದೆ ಎಂದು ಅನ್ವಿತ್‌ ಕಟೀಲ್‌ ಹೇಳಿದರು.

Leave a Reply