January 17, 2026
WhatsApp Image 2025-04-06 at 2.34.44 PM

ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಸಿಬ್ಬಂದಿಗಳ ಕಿರುಕುಳ ತಡೆಗೆ ರಾಜ್ಯ ಸರ್ಕಾರ ಇತ್ತೀಚೆಗೆ ಸುಗ್ರೀವಾಜ್ಞೆ ಮೂಲಕ ಹೊಸ ಕಾನೂನು ಜಾರಿ ಮಾಡಿತ್ತು. ಆದರೆ ಈ ಒಂದು ಕಾನೂನಿಗೆ ಕ್ಯಾರೆ ಎನ್ನದ ಮೈಕ್ರೋ ಫೈನಾನ್ಸ್ ಗಳು ಇದೀಗ ಕಿರುಕುಳವನ್ನು ಮುಂದುವರಿಸಿದ್ದು, ಇದೀಗ ಮೈಕ್ರೋ ಫೈನಾನ್ಸ್ ಸಿಬ್ಬಂದಿಗಳ ಕಿರುಕುಳಕ್ಕೆ ಬೇಸತ್ತು ಹಣ್ಣಿನ ವ್ಯಾಪಾರಿ ವಿಡಿಯೋ ಮಾಡಿ ಲೈವ್ ನಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ತುಮಕೂರಿನಲ್ಲಿ ನಡೆದಿದೆ.

ಹೌದು ತುಮಕೂರಿನಲ್ಲಿ ವಿಷ ಕುಡಿದ ಹಣ್ಣಿನ ವ್ಯಾಪಾರಿ ಕಿರುಕುಳಕ್ಕೆ ತಾಳದೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಲಾಗಿದೆ. ಮಂಡ್ಯ ಮೂಲದ ಮುಜೀಬ್ ಎಂಬ ಹಣ್ಣಿನ ವ್ಯಾಪಾರಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ತೀವ್ರ ಅಸ್ವಸ್ಥರಾಗಿದ್ದ ಅವರನ್ನು ತುಮಕೂರು ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಮೀಟರ್ ಬಡ್ಡಿ ಖಾಸಗಿ ಫೈನಾನ್ಸ್ ಸಿಬ್ಬಂದಿಗಳು ಕಿರುಕುಳ ನೀಡುತ್ತಿದ್ದರು. ಬಡ್ಡಿ ಕಿರುಕುಳ ತಾಳದೆ ಮುಜೀಬ್ ಮಂಡ್ಯದಿಂದ ತುಮಕೂರಿಗೆ ಬಂದಿದ್ದ. ಈ ವೇಳೆ ಲೈವ್ ವಿಡಿಯೋ ದಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಸಾಲ ಕೊಟ್ಟವರು ತುಮಕೂರಿಗೂ ಬಂದು ಕಿರುಕುಳ ನೀಡುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

About The Author

Leave a Reply