October 13, 2025
WhatsApp Image 2025-04-14 at 11.55.16 AM

ಹರಿಯಾಣ : ಕರ್ನಾಟಕದಲ್ಲಿ ಸರ್ಕಾರಿ ಗುತ್ತಿಗೆಯ್ಲಿ ಮುಸ್ಲಿಂರಿಗೆ ಶೇ.4 ರಷ್ಟು ಮೀಸಲಾತಿ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರು ಮತ್ತೆ ವಾಗ್ದಾಳಿ ನಡೆಸಿದ್ದಾರೆ.

ಹರಿಯಾಣದಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಕರ್ನಾಟಕದಲ್ಲಿ ಮುಸ್ಲಿಂರಿಗೆ ಒಬಿಸಿ ಮೀಸಲಾತಿ ಕಲ್ಪಿಸಿದೆ. ಹಿಂದುಳಿದ ವರ್ಗಗಳ ಮೀಸಲಾತಿ ಕಿತ್ತು ಮುಸ್ಲಿಮರಿಗೆ ನೀಡಲಾಗಿದೆ. ಎಸ್ ಸಿ, ಎಸ್ ಟಿ, ಒಬಿಸಿ ವರ್ಗದ ಜನರಿಗೆ ಕಾಂಗ್ರೆಸ್ ವಂಚನೆ ಮಾಡಿದೆ ಎಂದು ಕಿಡಿಕಾರಿದ್ದಾರೆ.

ಹರಿಯಾಣದ ಹಿಸಾರ್‌ನಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ಅನ್ನು ಗುರಿಯಾಗಿಸಿಕೊಂಡರು. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಸಂವಿಧಾನವನ್ನು ಹಾಳು ಮಾಡುವ ರೀತಿಯಲ್ಲಿ ಕಾಂಗ್ರೆಸ್ ವಕ್ಫ್ ಕಾನೂನನ್ನು ಮಾಡಿದೆ ಎಂದು ಅವರು ಹೇಳಿದರು.

ಕಾಂಗ್ರೆಸ್ ನ ದುಷ್ಟ ಪದ್ಧತಿಗಳಿಗೆ ದೊಡ್ಡ ಪುರಾವೆ ವಕ್ಫ್ ಕಾಯ್ದೆ ಎಂದು ಪ್ರಧಾನಿ ಮೋದಿ ಹೇಳಿದರು. ಕಾಂಗ್ರೆಸ್ 2013 ರಲ್ಲಿ ವಕ್ಫ್ ಕಾಯ್ದೆಗೆ ತಿದ್ದುಪಡಿ ತಂದಿತು. ಕಾಂಗ್ರೆಸ್ ವಕ್ಫ್ ಅನ್ನು ಸಂವಿಧಾನಕ್ಕಿಂತ ಮೇಲಿರಿಸಿತು. ಕಾಂಗ್ರೆಸ್ ಮೂಲಭೂತವಾದಿಗಳನ್ನು ಸಮಾಧಾನಪಡಿಸಿತು. ಕಾಂಗ್ರೆಸ್ ತನ್ನ ಮತ ಬ್ಯಾಂಕ್ ಅನ್ನು ತೃಪ್ತಿಪಡಿಸಿಕೊಳ್ಳಲು ತರಾತುರಿಯಲ್ಲಿ ತಿದ್ದುಪಡಿಗಳನ್ನು ಮಾಡಿತು ಎಂದು ಹೇಳಿದ್ದಾರೆ.

About The Author

Leave a Reply