
ಮಂಗಳೂರು: ಕಡಲ ತಡಿ ಮಂಗಳೂರಿನಲ್ಲಿ ಉತ್ತರ ಭಾರತ ಮೂಲದ ಯುವತಿಯೊಬ್ಬಳ ಮೇಲೆ ಭೀಕರ ಗ್ಯಾಂಗ್ ರೇಪ್ ನಡೆದಿದೆ. ಯುವತಿಯನ್ನ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಸಾಮೂಹಿಕ ಬಲಾತ್ಕಾರ ಎಸಗಲಾಗಿದೆ.

ಗೆಳೆಯನ ಜೊತೆಗೆ ಮುನಿಸಿಕೊಂಡು ಬಂದ ಯುವತಿಯನ್ನ ಮದ್ಯಪಾನ ಮಾಡಿಸಿ ಬಲಾತ್ಕಾರ ಮಾಡಿದ್ದು, ಮಂಗಳೂರಿನ ಸ್ಥಳೀಯ ಆಟೋ ಚಾಲಕ ಸೇರಿ ಮೂವರ ಬಂಧನವಾಗಿದೆ. ಮುಲ್ಕಿ ನಿವಾಸಿ 10 ವರ್ಷಕ್ಕಿಂತ ಹೆಚ್ಚು ಕಾಲ ಆಟೋ ಚಾಲಕನಾಗಿ ದುಡಿಯುತ್ತಿದ್ದ ಪ್ರಭುರಾಜ್ (38), ಕುಂಪಲ ನಿವಾಸಿ ಇಲೆಕ್ಟಿಷಿಯನ್ ಕಾರ್ಯನಿರ್ವಹಿಸುವ ಮಿಥುನ್ (30) ಹಾಗೂ ಮಂಗಳೂರಿನಲ್ಲಿ ವಾಸ ಮಾಡುವ ಮತ್ತೋರ್ವ ಗೆಳೆಯ ಮಣಿಯನ್ನು ಬಂಧಿಸಲಾಗಿದೆ.

ಮಧ್ಯರಾತ್ರಿ ಬಂದು ಸ್ಥಳೀಯ ಮನೆಯ ಬಾಗಿಲು ಬಡಿದಿದ್ದ ಯುವತಿ: ಮಂಗಳೂರು ಹೊರವಲಯದ ಉಳ್ಳಾಲ ತಾಲೂಕಿನ ಮುನ್ನೂರು ಗ್ರಾಮದ ಕುತ್ತಾರು ಎನ್ನುವ ಊರು ದಾಟಿ ಸಾಗಿದಾಗ ಇಳಿಜಾರಿನಂತಿರೋ ಬಂಗ್ಲೆ ಕೊಟ್ಟಾರಿಮೂಲೆ ಎನ್ನುವ ನಿರ್ಜನ ಪ್ರದೇಶದಲ್ಲಿ ನಡೆದ ಈ ಘಟನೆ ಇಡೀ ಮಂಗಳೂರಿಗರನ್ನ ಅಕ್ಷರಶಃ ಬೆಚ್ಚಿ ಬೀಳಿಸಿದೆ. ಮುನ್ನೂರು ಗ್ರಾಮದ ಜನರು ಇನ್ನೇನು ನಿದ್ದೆಗೆ ಜಾರಬೇಕು ಎನ್ನುವಷ್ಟರಲ್ಲಿ ಗ್ರಾಮದ ರಾಜೇಶ್ ಎಂಬವರ ಮನೆಯ ಬಾಗಿಲು ಬಡಿದ ಸದ್ದು ಕೇಳಿಸಿದೆ.

ಮನೆಯವರು ಹೊರಗೆ ಬಂದು ನೋಡಿದಾಗ ಯುವತಿಯೊಬ್ಬಳು ನಶೆಯಲ್ಲಿದ್ದು, ಕಣ್ಣೀರು ಹಾಕುತ್ತಲೇ ಮನೆಯವರ ಬಳಿ ನೀರು ಕೇಳಿದ್ದಾಳೆ. ನೀರು ಕೇಳಿದ ತಕ್ಷಣ ಆಕೆ ಪ್ರಜ್ಞೆ ತಪ್ಪಿದ್ದು, ಸೇರಿದ ಗ್ರಾಮಸ್ಥರು ತಕ್ಷಣ ಪೊಲೀಸರಿಗೆ ವಿಷಯ ತಿಳಿಸಿದ್ದು, ಪೊಲೀಸರು ಸ್ಥಳಕ್ಕೆ ಬಂದಿದ್ದಾರೆ. ಪರಾರಿಯಾಗಿದ್ದಾರೆ. ಆ ಬಳಿಕ ಸ್ಥಳೀಯರ ಸಹಾಯದೊಂದಿಗೆ ಪೊಲೀಸರನ್ನು ಸಂಪರ್ಕಿಸಿದ್ದಾಳೆ. ಅವಳ ದೂರಿನ ಆಧಾರದಲ್ಲಿ ಬಲಾತ್ಕಾರ ಪ್ರಕರಣ ದಾಖಲಿಸಿದ್ದೇವೆ. ನಿನ್ನೆ ಬೆಳಿಗ್ಗೆ ತನ್ನ ಗೆಳೆಯನ ಜೊತೆಗೆ ಕೆಲಸ ಹುಡುಕಿಕೊಂಡು ಮಂಗಳೂರಿಗೆ ಬಂದಿದ್ದಳು. ಪಶ್ಚಿಮ ಬಂಗಾಳದ ಕುಚ್ ಬಿಹಾರ್ ಮೂಲದವಳಾದ ಯುವತಿ 2-3 ವರ್ಷಗಳಿಂದ ಕೇರಳದ ಫ್ಲೈವುಡ್ ಕಂಪೆನಿಯಲ್ಲಿ ಕೆಲಸ ಮಾಡಿಕೊಂಡಿದ್ದಳು. ಮಂಗಳೂರಿನಲ್ಲಿ ಬೇರೆ ಸಂಸ್ಥೆಯಲ್ಲಿ ಕೆಲಸದ ಅವಕಾಶವಿದ್ದ ಕಾರಣ ಗೆಳೆಯನ ಜೊತೆ ಮಂಗಳೂರಿಗೆ ಬಂದಿದ್ದಳು. ಈ ವೇಳೆ ಗೆಳೆಯನ ಜೊತೆಗೆ ಜಗಳವಾಗಿ ಆತ ಈಕೆಯ ಮೊಬೈಲಿಗೆ ಹಾನಿ ಮಾಡಿದ್ದ. ಹಾಗಾಗಿ ಮೊಬೈಲ್ ರಿಪೇರಿಗೆಂದು ಆಟೋ ಹಿಡಿದು ಮೊಬೈಲ್ ಅಂಗಡಿಗೆ ತೆರಳಿದ್ದಾಳೆ. 5-6 ಗಂಟೆಗಳ ಕಾಲ ಆಕೆ ಆಟೋ ಡ್ರೈವರ್ ಜೊತೆಗೇ ಇದ್ದು, ಅವನ ಜೊತೆಗೆ ಗೆಳೆತನ ಆಗಿದೆ. ಮೊಬೈಲ್ ರಿಪೇರಿ ಹಣ ಕೂಡಾ ಆತನೇ ಪಾವತಿಸಿದ್ದ. ಆ ಬಳಿಕ ಆಕೆ ರಾತ್ರಿ ವೇಳೆ ಪ.ಬಂಗಾಳ ಹೋಗಲು ರೈಲ್ವೇ ನಿಲ್ದಾಣಕ್ಕೆ ಬಿಡಲು ಆಟೋ ಡ್ರೈವರಿಗೆ ಹೇಳುತ್ತಾಳೆ. ಆದರೆ ಕಂಕನಾಡಿ ರೈಲ್ವೇ ನಿಲ್ದಾಣಕ್ಕೆ ಹೋಗದೇ ಆಟೋ ಡ್ರೈವರ್ ಮತ್ತಿಬ್ಬರ ಗೆಳೆಯರನ್ನು ಕರೆಸಿ ಬೇರೊಂದು ಜಾಗಕ್ಕೆ ಹೋಗುತ್ತಾರೆ. ಆ ಜಾಗದಲ್ಲಿ ಆಕೆಗೆ ಚೆನ್ನಾಗಿ ಮದ್ಯಪಾನ ಮಾಡಿಸಿ, ಆಕೆ ಪ್ರಜ್ಞೆ ತಪ್ಪಿದ್ದು , ಪ್ರಜ್ಞೆ ಬಂದಾಗ ಬಲಾತ್ಕಾರ ನಡೆದಿರುವುದು ಆಕೆ ಗಮನಕ್ಕೆ ಬಂದಿದೆ.ವಾಸನೆ ಸಹಿತ ಹಳದಿ ಬಣ್ಣ ಕೊಳಚೆ ನೀರೇ ಕಟ್ಟೆಹಾಡಿ ಜನರಿಗೆ ಜೀವಜಲ!ಸದ್ಯ ಈ ಪ್ರಕರಣದ ತನಿಖೆ ನಡೆಸಿ ಮೂವರನ್ನು ವಶಕ್ಕೆ ಪಡೆಯಲಾಗಿದೆ. ಮುಲ್ಕಿ ನಿವಾಸಿ 10 ವರ್ಷಕ್ಕಿಂತ ಹೆಚ್ಚು ಕಾಲ ಆಟೋ ಚಾಲಕನಾಗಿ ದುಡಿಯುತ್ತಿದ್ದ ಪ್ರಭುರಾಜ್ (38),. ನಿನ್ನೆ ಮಧ್ಯಾಹ್ನ 2.30 ಸುಮಾರಿಗೆ ಆಕೆಯನ್ನು ಆಟೋದಲ್ಲಿ ಪ್ರಭುರಾಜ್ ಪಿಕಪ್ ನಡೆಸಿದ್ದನು.
ಆ ಬಳಿಕ ಪ್ರಭುರಾಜ್ ಕುಂಪಲ ನಿವಾಸಿ ಇಲೆಕ್ಟೀಷಿಯನ್ ಕಾರ್ಯನಿರ್ವಹಿಸುವ ಮಿಥುನ್ (30) ಹಾಗೂ ಮಂಗಳೂರಿನಲ್ಲಿ ವಾಸ ಮಾಡುವ ಮತ್ತೋರ್ವ ಗೆಳೆಯ ಮಣಿ ಎಂಬಾತನನ್ನು ಕರೆದಿರುತ್ತಾರೆ. ಈ ಮೂವರು ಆಕೆಗೆ ಚೆನ್ನಾಗಿ ಕುಡಿಸಿ ಅವರು ಚೆನ್ನಾಗಿ ಕುಡಿದು ಬಲಾತ್ಕಾರ ಎಸಗಿದ್ದಾರೆ. ಯುವತಿ ತನ್ನ ಹೇಳಿಕೆಯಲ್ಲಿ ತನ್ನ ಮೇಲೆ ಬಲಾತ್ಕಾರ ಆಗಿರುವುದಾಗಿ ಹೇಳಿದ್ದಾಳೆ. ವೈದ್ಯಕೀಯ ವರದಿ ಬಂದ ಬಳಿಕ ಬಲಾತ್ಕಾರ ಆಗಿದೆ ಇಲ್ಲವೋ ಅನ್ನುವುದು ದಢಪಡಿಸಲಾಗುವುದು ಎಂದಿದ್ದಾರೆ.