ಮಂಗಳೂರು : ‘ವಕ್ಫ್’ ತಿದ್ದುಪಡಿ ವಿರೋಧಿಸಿ ಪ್ರತಿಭಟನೆ ವೇಳೆ, ರಾಷ್ಟೀಯ ಹೆದ್ದಾರಿ ಬಂದ್ ಮಾಡಿದಕ್ಕೆ ‘FIR’ ದಾಖಲು

ಮಂಗಳೂರು : ವಕ್ಫ್ ತಿದ್ದುಪಡಿ ವಿರೋಧಿ ಸೇನೆನೆ ಮಂಗಳೂರಿನ ಅಡ್ಯಾರ್ ಮೈದಾನದಲ್ಲಿ ಪ್ರತಿಭಟನೆ ಆಯೋಜನೆ ಮಾಡಲಾಗಿತ್ತು. ಈ ವೇಳೆ ರಾಷ್ಟ್ರೀಯ ಹೆದ್ದಾರಿಯನ್ನು ಬಂದ್ ಮಾಡಿದ್ದ ಹಿನ್ನೆಲೆಯಲ್ಲಿ ಮೂವರ ವಿರುದ್ಧ ಮಂಗಳೂರಿನ ಕಂಕನಾಡಿ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ.

ಹೌದು ಪ್ರತಿಭಟನೆ ವೇಳೆ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿದ ವಿಚಾರವಾಗಿ ಪ್ರತಿಭಟನಾಕಾರರ ವಿರುದ್ಧ ಇದೀಗ ಮಂಗಳೂರಿನ ಕಂಕನಾಡಿ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ. ವಕ್ಫ್ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ನಿನ್ನೆ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ನಡೆದಿತ್ತು. ಕೃಷ್ಣಾಪುರ ನಿವಾಸಿ ಜಲೀಲ್, ಹೊಳಚ್ಚಿಲ್ ನಿವಾಸಿ ಫಾಜಿಲ್ ಹಾಗು ಮೊಹಮ್ಮದ್ ಹನೀಫ್ ನೌಫಾಲ್ ವಿರುದ್ಧ ಇದೀಗ ಎಫ್ಐಆರ್ ದಾಖಲಾಗಿದೆ.

BNS ಕಾಯ್ದೆ 189(2), 126(2), 270, 324, 132, 185, 190ರಡಿ ಪ್ರಕರಣ ದಾಖಲಾಗಿದೆ ನೆನ್ನೆ ಮಂಗಳೂರಿನ ಆಡಾರಿನಲ್ಲಿ ಪ್ರತಿಭಟನೆ ನಡೆದಿತ್ತು. ಪ್ರತಿಭಟನೆಗೂ ಮುನ್ನ ಹೈಕೋರ್ಟ್ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡದಂತೆ ಪ್ರತಿಭಟನೆ ಮಾಡಿ ಎಂದು ಸೂಚನೆ ನೀಡಿತ್ತು. ಆದರೆ ಹೈಕೋರ್ಟ್ ಆದೇಶವನ್ನು ಮೀರಿಭಟ್ಟನಾಕಾರರು ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿದ್ದರು ಹಾಗಾಗಿ ಇದೀಗ ಮೂವರ ವಿರುದ್ಧ FIR ದಾಖಲಾಗಿದೆ.

Leave a Reply