
ಕಾಸರಗೋಡು : ಪಹಲ್ಗಾಮ್ ದಾಳಿಯ ವೇಳೆ ಉಗ್ರರಿಗೆ ತಲ್ವಾರ್ ತೋರಿಸಿದ್ರೆ ಸಾಕಿತ್ತು. ಹಿಂದೂಗಳು ಕೇವಲ ತಲ್ವಾರ್ ತೋರಿಸಿದರೆ ಕಥೆ ಬೇರೆಯಾಗುತ್ತಿತ್ತು. ಇನ್ಮುಂದೆ ಹೆಣ್ಣು ಮಕ್ಕಳು ವ್ಯಾನಿಟಿ ಬ್ಯಾಗ್ ನಲ್ಲಿ ಚೂರಿ ಇಟ್ಕೊಳ್ಳಿ ಎಂದು RSS ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಹೇಳಿಕೆ ನೀಡಿದ್ದಾರೆ.



ವರ್ಕಾಡಿಯಲ್ಲಿ ಆರ್ ಎಸ್ ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಈ ಕುರಿತು ಹೇಳಿಕೆ ನೀಡಿದ್ದಾರೆ. ಕೇರಳದ ಕಾಸರಗೋಡು ಜಿಲ್ಲೆಯ ಮಂಜೇಶ್ವರ ತಾಲೂಕಿನ ವರ್ಕಾಡಿಯಲ್ಲೂ ಹೆಣ್ಣು ಮಕ್ಕಳು ವ್ಯಾನಿಟಿ ಬ್ಯಾಗ್ ನಲ್ಲಿ ಚೂರಿ ಇಟ್ಕೊಳ್ಳಿ. ಪೌಡರ್ ಬಾಚಣಿಗೆ ಜೊತೆಗೆ ಚಾಕು ಇಟ್ಟುಕೊಳ್ಳಿ. ಆರು ಇಂಚಿನ ಚೂರಿ ಇಟ್ಕೊಳ್ಳಲು ಯಾವುದೇ ಲೈಸೆನ್ಸ್ ಬೇಡ.
ಸಂಜೆ ಮೇಲೆ ಓಡಾಡಿದರೆ ನಿಮ್ಮ ಮೇಲೆ ಖಂಡಿತಾ ಆಕ್ರಮಣ ಮಾಡುತ್ತಾರೆ. ಆಕ್ರಮಣ ಮಾಡಬೇಡಿ ಎಂದು ಬೇಡಿಕೊಂಡರೆ ನಿಮ್ಮ ಕಥೆ ಮುಗೀತು. ಅದರ ಬದಲು ಚೂರಿ ತೋರಿಸಿ ಸಾಕು ಹೆದರಿ ಓಡುತ್ತಾರೆ. ಮುಸ್ಲಿಮರು ಹೊಡಿತಾರೆ ಹಿಂದೂಗಳು ಓಡುತ್ತಾರೆ ಅಂತ ಇತ್ತು. ಈಗ ಹಿಂದೂ ತಿರುಗಿ ಬಿದ್ದಿದ್ದಾನೆ ಇನ್ನು ಹೊಡೆಯಲು ಶುರು ಮಾಡಿಲ್ಲ. ಮನೆಯಲ್ಲಿ ಒಂದು ತಲ್ವಾರ್ ಇಟ್ಕೊಳ್ಳಿ ಎಂದು ಕಲ್ಲಡ್ಕ ಪ್ರಭಾಕರ್ ಭಟ್ ಹೇಳಿಕೆ ನೀಡಿದರು.