
2024-25ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KEA) ಇಂದು ಪ್ರಕಟಿಸಲಿದೆ. ಫಲಿತಾಂಶಕ್ಕೆ ಕ್ಷಣಗಣನೆ ಆರಂಭವಾಗಿದೆ. ಬೆಳಗ್ಗೆ 11.30ಕ್ಕೆ ಸಚಿವ ಮಧು ಬಂಗಾರಪ್ಪ ಸುದ್ದಿಗೋಷ್ಠಿ ಮೂಲಕ ಫಲಿತಾಂಶ ಪ್ರಕಟಿಸಲಿದ್ದಾರೆ. ಮಧ್ಯಾಹ್ನ 12.30ರ ನಂತರ ಇಲಾಖೆಯ ಅಧಿಕೃತ ವೆಬ್ಸೈಟ್ನಲ್ಲಿ ವಿದ್ಯಾರ್ಥಿಗಳು ಫಲಿತಾಂಶ ವೀಕ್ಷಿಸಬಹುದಾಗಿದೆ. ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಮಾಡಿದಂತೆಯೇ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೂ ಈ ವರ್ಷ ಇನ್ನೆರಡು ಪರೀಕ್ಷೆಯ ಅವಕಾಶ ನೀಡಲಾಗುತ್ತಿದೆ. ಉತ್ತೀರ್ಣರಾಗದಿದ್ದರೆ ಅಥವಾ ಉತ್ತಮ ಅಂಕ ಲಭಿಸದಿದ್ದರೆ ವಿದ್ಯಾರ್ಥಿಗಳು ಇನ್ನು ಎರಡು ಬಾರಿ ಪರೀಕ್ಷೆ ಬರೆಯಬಹುದಾಗಿದೆ.


