October 13, 2025
WhatsApp Image 2025-05-13 at 8.37.38 PM

ಮಂಗಳೂರು: ಕರಾವಳಿ ಭಾಗದ ಅಭಿವೃದ್ಧಿಗಾಗಿ ಸಮಾಲೋಚನೆ ಸಭೆ ನಡೆಸುವ ಕುರಿತಾಗಿ ಸಿಎಂ ಸಿದ್ದರಾಮಯ್ಯ ಅವರಿಗೆ ವಿಧಾನ ಪರಿಷತ್ ಶಾಸಕ ಮಂಜುನಾಥ ಭಂಡಾರಿ ಪತ್ರ ಬರೆದು ಮನವಿ ಮಾಡಿದ್ದಾರೆ.

ಕರಾವಳಿ ಭಾಗದ ಅಭಿವೃದ್ಧಿಗೆ ಪ್ರವಾಸೋದ್ಯಮ ಬೆಳವಣಿಗೆ, ಕೈಗಾರಿಕಾ ಸ್ಥಾಪನೆ ಮತ್ತು ಅಭಿವೃದ್ಧಿ, ನೈಸರ್ಗಿಕ ಸಂಪನ್ಮೂಲಗಳ ಸದ್ಬಳಕೆ ಹಾಗೂ ಉದ್ಯೋಗ ಸೃಜನೆಗೆ ಪ್ರಾಮುಖ್ಯತೆ ನೀಡುವ ಅಗತ್ಯವಿದ್ದು, ಈ ಕುರಿತಾಗಿ ಮೇ.16 ಮಂಗಳೂರು ಪ್ರವಾಸ ಸಂದರ್ಭ ಅಭಿಭಾಜ್ಯ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಚುನಾಯಿತ ಪ್ರತಿನಿಧಿಗಳು, ಜಿಲ್ಲೆಯ ಕೈಗಾರಿಕೋದ್ಯಮಿಗಳು, ಬಂಡವಾಳ ಹೂಡಿಕೆದಾರರು ಹಾಗೂ ಸಂಬಂಧಿಸಿದ ಪ್ರಮುಖ ಇಲಾಖೆಯ ಅಧಿಕಾರಿಗಳ ಜೊತೆ ಪ್ರತ್ಯೇಕ ಸಮಾಲೋಚನೆ ಸಭೆಯನ್ನು ತಮ್ಮ ಅಧ್ಯಕ್ಷತೆಯಲ್ಲಿ ಆಯೋಜಿಸುವಂತೆ ಪತ್ರದಲ್ಲಿ ಶಾಸಕ ಮಂಜುನಾಥ ಭಂಡಾರಿ ಅವರು ಸಿಎಂ ಅವರನ್ನು ಕೋರಿದ್ದಾರೆ.

About The Author

Leave a Reply