
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿರುವ ಸರಣಿ ಕೊಲೆಗಳು ಮತ್ತು ಅದನ್ನು ತಡೆಯುವಲ್ಲಿ ರಾಜ್ಯ ಗೃಹ ಇಲಾಖೆ ವೈಫಲ್ಯ ಮತ್ತು ಜಿಲ್ಲೆಯ ಮುಸ್ಲಿಮರ ಕಡೆಗಣನೆ ಹಾಗೂ ಅಮಾಯಕ ಯುವಕ ಅಬ್ದುಲ್ ರಹಿಮಾನ್ ಕೊಳ್ತಮಜಲು ಹತ್ಯೆ ಆರೋಪಿ ಗಳಿಗೆ ಕಠಿಣ ಕ್ರಮ ಮತ್ತು ಸಹೋದರನ ಕುಟುಂಬಕ್ಕೆ ಸೂಕ್ತ ರೀತಿಯಲ್ಲಿ ಪರಿಹಾರ ಕಲ್ಪಿಸಿಕೊಡಬೇಕಾಗಿ ಅಗ್ರಹಿಸಿ ಕಾಂಗ್ರೆಸ್ ಪಕ್ಷದ ಎಲ್ಲಾ ಚಟುವಟಿಕೆಗಳಿಂದ ಜಿಲ್ಲಾ ಪಂಚಾಯತ್ ಸದಸ್ಯ ಯುಪಿ ಇಬ್ರಾಹಿಂ ಹಾಗೂ ಇನ್ನಿತರ ಮುಸ್ಲಿಂ ಮುಖಂಡರು ನಾಳೆ ಮುಸ್ಲಿಂ ಮುಖಂಡರ ಸಭೆ ಯಲ್ಲಿ ರಾಜೀನಾಮೆ ನೀಡಲು ತೀರ್ಮಾನಿಸಿದ್ದಾರೆ.
