September 19, 2026
WhatsApp Image 2025-05-30 at 11.05.47 AM

ಮಂಗಳೂರು: ಹಿಂದೂ ಜಾಗರಣ ವೇದಿಕೆಯ ದಕ್ಷಿಣ ಕನ್ನಡ ಜಿಲ್ಲಾ ಸಂಯೋಜಕ ನರಸಿಂಹ ಮಾಣಿ ಎಂಬವರಿಗೆ ಪಾಕಿಸ್ತಾನದ ಜೈಷ್ ಎ ಮೊಹಮ್ಮದ್ ಸಂಘಟನೆಯ ಹೆಸರಿನಲ್ಲಿ ಜೀವ ಬೆದರಿಕೆ ಸಂದೇಶ ಬಂದಿದೆ. ನಿನ್ನ ಸ್ನೇಹಿತನ ಕೈ ಕಾಲು ಕಡಿಯುತ್ತೇವೆ. ನಂತರ ತಲೆ ಕಡಿದು ದೆಹಲಿಯ ಮೈನ್ ಗೇಟ್​​ನಲ್ಲಿ ನೇತು ಹಾಕುತ್ತೇವೆ. ನಾವು ಹಿಂದೂ ಮುಖಂಡರ ಲಿಸ್ಟ್ ರೆಡಿ ಮಾಡಿದ್ದೇವೆ. ನಾವು ಈಗಲೇ ದೆಹಲಿ ತಲುಪಿಯಾಗಿದೆ…ಹೀಗೆಂದು ಉರ್ದು ಬಾಷೆಯಲ್ಲಿ ಆಡಿಯೋ ಮೆಸೇಜ್ ಬಂದಿದೆ.

ಹಲವು ಹಿಂದೂ ಮುಖಂಡರ ಪಟ್ಟಿ ಸಿದ್ಧ ಮಾಡಿದ್ದೇವೆ. ನಿನ್ನ (ನರಸಿಂಹ ಮಾಣಿ) ಹೆಸರು ಲಿಸ್ಟ್‌ನಲ್ಲಿ ಮೊದಲಿಗಿದೆ. ನಿನ್ನ ಎಲ್ಲ ಚಲನವಲನಗಳನ್ನು ಗಮನಿಸುತ್ತಿದ್ದೇವೆ.

ಕೊಲೆಯಾದ ಸುಹಾಸ್ ಶೆಟ್ಟಿ ಕೂಡ ನಮ್ಮ ಪಟ್ಟಿಯಲ್ಲಿದ್ದ. ಆದರೆ ಯಾರೋ ಒಳ್ಳೆಯ ಜನ ಅವನನ್ನು‌ ಕೊಂದು‌ ಹಾಕಿದ್ದಾರೆ. ನಿನ್ನ ಸ್ನೇಹಿತ ರಂಜಿತ್ ಎಂಬವನನ್ನು ಕೊಲ್ಲುತ್ತೇವೆ. ತಲೆ ಕಡಿದು ಸುಲಭವಾಗಿ ಕೊಲ್ಲುವುದಿಲ್ಲ. ಮೊದಲು ಆತನ ಕೈ ಕಾಲು ಕಡಿಯುತ್ತೇವೆ. ನಂತರ ತಲೆ ಕಡಿದು‌ ದೆಹಲಿಯ ಮೈನ್ ಗೇಟ್​​ನಲ್ಲಿ ನೇತು ಹಾಕುತ್ತೇವೆ.

ನಾವು ದೆಹಲಿಗೆ ಬಂದು ತಲುಪಿಯಾಗಿದೆ. ನಿಮ್ಮ ಉಲ್ಟಾ ಲೆಕ್ಕಾಚಾರ ಸ್ಟಾರ್ಟ್ ಆಗಿದೆ ಎಂದು ಉಗ್ರರ ಹೆಸರಿನಲ್ಲಿ ಬಂದ ಸಂದೇಶದಲ್ಲಿ ಬೆದರಿಕೆ ಒಡ್ಡಲಾಗಿದೆ.

‘ನಿನ್ನನ್ನು (ನರಸಿಂಹ ಮಾಣಿ) ಹೇಗೆ ಕೊಲ್ಲುತ್ತೇವೆ ಎಂದು ಅಲ್ಲಾನಿಗೆ ಕೂಡ ಗೊತ್ತಿಲ್ಲ. ನಿನ್ನನ್ನು ಕೊಲೆ ಮಾಡಿದ ರೀತಿಯನ್ನು ನೋಡಿ ಜನ ಕೊಲ್ಲುವ ವಿಧಾನವನ್ನೇ ಮರೆಯಲಿದ್ದಾರೆ. ಮುಸ್ಲಿಮರಿಗೆ ತೊಂದರೆ ಕೊಡುವುದನ್ನು ಬಿಟ್ಟು ನಿನ್ನ ಬಗ್ಗೆ ಯೋಚಿಸು.

ನಿಮ್ಮ ಪಾರ್ಟಿ ಅಥವಾ ಯಾವುದೇ ಮುಖಂಡರು ನಿಮ್ಮನ್ನು ರಕ್ಷಿಸಲು ಸಾಧ್ಯವಿಲ್ಲ. ನಿಮ್ಮ ಜೊತೆಗೆ ನಿಮ್ಮ ಮುಖಂಡರನ್ನು ಮುಗಿಸಲಾಗುವುದು. ಇದು ಮುಜಾಹಿದೀನ್ ಸಂದೇಶ ಎಂದು ಜೈಷ್ ಎ ಮೊಹಮ್ಮದ್ ಉಗ್ರ ಸಂಘಟನೆ ಹೆಸರಿನಲ್ಲಿ ಬಂದ ಸಂದೇಶದಲ್ಲಿ ಹೇಳಲಾಗಿದೆ.

ಬೆದರಿಕೆ ಸಂದೇಶ ಪಾಕಿಸ್ತಾನ, ಅಫ್ಘಾನಿಸ್ತಾನ, ಸೌದಿ ಅರೇಬಿಯಾ ಮೊಬೈಲ್ ಸಂಖ್ಯೆಯಿಂದ ಬಂದಿದೆ. ಬೆದರಿಕೆ ಸಂದೇಶದ ಬಗ್ಗೆ ಬಂಟ್ವಾಳ ಪೊಲೀಸ್ ಠಾಣೆ ವೃತ್ತ ನಿರೀಕ್ಷಕರಿಗೆ ದೂರು ನೀಡಲಾಗಿದೆ. ಮುಸ್ಲಿಮ್ ಸಹೋದರನ ಕೊಲೆಯಲ್ಲಿ ಶಾಮೀಲಾಗಿರುವ ರಾಕೇಶ್ ಬುಡೋಳಿ, ನಿಮ್ಮ ಸಹಚರ ನರಸಿಂಹ ಮಾಣಿ ಹಾಗೂ ಇತರ ಎಲ್ಲ ಹೆಸರುಗಳು ನಮ್ಮ ಪಟ್ಟಿಗೆ ಸೇರಿಸಲಾಗಿದೆ. ನಾವು ದೂರವಿಲ್ಲ ನಾವು ನಿಮ್ಮ ಮನೆ ತಲುಪಿದ್ದೇವೆ. ಈಗ ನರಸಿಂಹನ ಕ್ಷಣಗಣನೆ ಆರಂಭವಾಗಿದೆ. ಸತ್ತ ಸುಹಾಸ್‌ ಶೆಟ್ಟಿ ಅವನಂತೆ ನಿಮ್ಮಿಬ್ಬರನ್ನು ನಾವು ಕೊಲ್ಲುತ್ತೇವೆ. ಜೈಶ್-ಎ-ಮೊಹಮ್ಮದ್‌ನ ಮುಜಾಹಿದ್ದೀನ್​ಗಳಾದ ನಾವು ನವದೆಹಲಿಯನ್ನು ತಲುಪಿದ್ದೇವೆ. ನಾವು ದೆಹಲಿಯಲ್ಲಿದ್ದೇವೆ ಎಂದು ಹೇಳಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಜೀವ ಬೆದರಿಕೆಯನ್ನು ಒಡ್ಡಿರುತ್ತಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

About The Author

Leave a Reply