
ತನ್ನ ಮೂರನೇ ಹೆಂಡತಿಯನ್ನು ಭೀಕರವಾಗಿ ಕೊಲೆ ಮಾಡಿ ಬಸ್ನಲ್ಲಿ ಲಗೇಜ್ ಇದೆ ಎಂದು ಕಳುಹಿಸಿ ವಿಕೃತಿ ಮೆರೆದಿದ್ದ ವೃದ್ಧ ಬರೋಬ್ಬರಿ 23 ವರ್ಷದ ಬಳಿಕ ಪೊಲೀಸರ ಅತಿಥಿಯಾಗಿದ್ದಾನೆ. ಹೌದು ವೃದ್ಧನೊಬ್ಬ ತನ್ನ ಮೂರನೇ ಹೆಂಡತಿಯನ್ನು ಭೀಕರ ಬಗ್ಗೆ ಕೊಲೆ ಮಾಡಿದ್ದು ಅಲ್ಲದೆ ಬಸ್ನಲ್ಲಿ ಲಗೇಜ್ ಎಂದು ಶವ ಸಾಗಿಸಿ ಏನು ಆಗಿಲ್ಲವೆಂಬತ್ತೆ ಇದ್ದ ಆದರೆ ಇದೀಗ ರಾಯಚೂರು ಪೊಲೀಸರು ಆದರೆ ರಾಯಚೂರು ಪೊಲೀಸರು ವೃದ್ಧನನ್ನು ಅರೆಸ್ಟ್ ಮಾಡಿದ್ದಾರೆ.

ವ್ಯಕ್ತಿಯೊಬ್ಬ ಇಳಿ ವಯಸ್ಸಿನಲ್ಲಿ ತನ್ನ ಮೂರನೇ ಹೆಂಡತಿಯನ್ನು ಹತ್ಯೆ ಮಾಡಿ ಮೃತದೇಹವನ್ನು ಲಗೇಜ್ ಎಂದು ಬಸ್ಸಿನಲ್ಲಿ ಕಳುಹಿಸಿ ಪರಾರಿಯಾಗಿದ್ದಲ್ಲದೆ, ತಲೆಮರೆಸಿಕೊಂಡು ಹಾಯಾಗಿದ್ದ! ಇದೀಗ ಕೃತ್ಯ ಎಸಗಿ 23 ವರ್ಷಗಳ ಬಳಿಕ ರಾಯಚೂರಿನಲ್ಲಿ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಆರು ತಿಂಗಳ ಹಿಂದೆ ಸ್ವಗ್ರಾಮಕ್ಕೆ ಬಂದಿದ್ದ ಹಂತಕನ ಜಾಡು ಹಿಡಿದು ಶೋಧ ನಡೆಸಿದ ಪೊಲೀಸರು, ಕೊನೆಗೂ ಆತನನ್ನು ಖೆಡ್ಡಾಕ್ಕೆ ಕೆಡವುವಲ್ಲಿ ಯಶಸ್ವಿಯಾಗಿದ್ದಾರೆ. ರಾಯಚೂರ ಜಿಲ್ಲೆಯ ಮಾನ್ವಿಯಲ್ಲಿ ಆರೋಪಿ 75 ವರ್ಷದ ಹುಸೇನಪ್ಪನನ್ನು ಬಂಧಿಸಲಾಗಿದೆ.

2002 ರಲ್ಲಿ ಹೆಂಡತಿಯನ್ನು ಕೊಚ್ಚಿ ಕೊಲೆ ಮಾಡಿದ್ದ ಹುಸೇನಪ್ಪ, ಶವವನ್ನು ಲಗೇಜ್ ಎಂದು ಕಂಪ್ಲಿ ಬಸ್ನಲ್ಲಿ ಕಳುಹಿಸಿದ್ದ. ಆ ಬಳಿಕ ಪರಾರಿಯಾಗಿ ತಲೆಮರೆಸಿಕೊಂಡಿದ್ದ. ನಂತರ ದೂರು ದಾಖಲಿಸಿಕೊಂಡಿದ್ದ ಪೊಲೀಸರು ತನಿಖೆ ಆರಂಭಿಸಿದ್ದರು. ಆದರೆ, ಆರೋಪಿಯನ್ನು ಪತ್ತೆಹೆಚ್ಚಿ ಬಂಧಿಸಲು ಸಾಧ್ಯವಾಗಿರಲಿಲ್ಲ. ಆರು ತಿಂಗಳ ಹಿಂದೆ ಆರೋಪಿ ಸ್ವಗ್ರಾಮ ಹಾಲದಾಳಕ್ಕೆ ಬಂದಿರುವ ಬಗ್ಗೆ ಪೊಲೀಸರಿಗೆ ಖಚಿತ ಸುಳಿವು ದೊರೆತಿತ್ತು. ಅದರ ಆಧಾರದಲ್ಲಿ ಪೊಲೀಸರು ಆರೋಪಿಯ ಜಾಡು ಹಿಡಿದಿದ್ದರು. ನಂತರ ಕಾರ್ಯಾಚರಣೆ ನಡೆಸಿದ ಗಂಗಾವತಿ ಪೊಲೀಸರು, ರಾಯಚೂರ ಜಿಲ್ಲೆಯ ಮಾನ್ವಿಯಲ್ಲಿ ಹುಸೇನಪ್ಪನನ್ನು ಬಂಧಿಸಿದ್ದಾರೆ.
