
ಧರ್ಮಸ್ಥಳ: ನೇತ್ರಾವತಿ ಸ್ನಾನ ಘಟ್ಟದ ಬಳಿಯಲ್ಲಿ ಪಾಯಿಂಟ್.1 ರಲ್ಲಿ ಅಸ್ಥಿ ಪಂಜರಕ್ಕಾಗಿ ಶೋಧ ಕಾರ್ಯಾಚರಣೆಯ ವೇಳೆಯಲ್ಲಿ ಡೆಬಿಟ್ ಕಾರ್ಡ್, ಪಾನ್ ಕಾರ್ಡ್ ದೊರೆತಿತ್ತು. ಆ ಬಗ್ಗೆ ತನಿಖೆ ನಡೆಸಿರುವಂತ ಎಸ್ಐಟಿ ತಂಡವು, ಅವುಗಳ ರಹಸ್ಯವನ್ನು ಬಯಲು ಮಾಡಿದ್ದಾರೆ.


ಹೌದು ಈ ಬಗ್ಗೆ ಎಸ್ಐಟಿ ಅಧಿಕಾರಿಗಳು ಪಾಯಿಂಟ್ ನಂ.1ರಲ್ಲಿ ಸಿಕ್ಕಿದ್ದಂತ ಡೆಬಿಟ್, ಪಾನ್ ಕಾರ್ಡ್ ತನಿಖೆ ನಡೆಸಿದ್ದು, ಈ ತನಿಖೆಯಲ್ಲಿ ಡೆಬಿಟ್ ಕಾರ್ಡ್ ವಾರಸುದಾರ ಮಹಿಳೆ ಇನ್ನೂ ಜೀವಂತವಾಗಿದ್ದಾರೆ ಎಂಬುದನ್ನು ಪತ್ತೆ ಹಚ್ಚಿದ್ದಾರೆ.

ಇನ್ನೂ ಪಾನ್ ಕಾರ್ಡ್ ವಾರಸುದಾರ ಅನಾರೋಗ್ಯದಿಂದ ಮೃತಪಟ್ಟ ಬಗ್ಗೆ ಮಾಹಿತಿ ಲಭ್ಯವಾಗಿದೆ. ಡೆಬಿಟ್ ಕಾರ್ಡ್ ಮೃತಪಟ್ಟ ವ್ಯಕ್ತಿಯ ತಾಯಿಗೆ ಸೇರಿದ್ದೆಂದು ಮಾಹಿತಿ ತಿಳಿದು ಬಂದಿದೆ. ಈ ಬಗ್ಗೆ ಡೆಬಿಟ್ ಕಾರ್ಡ್ ವಾರಸುದಾರ ಮಹಿಳೆಯನ್ನು ಸಂಪರ್ಕಿಸಿ ಎಸ್ಐಟಿ ಮಾಹಿತಿ ಪಡೆದಿದೆ.
ಈ ಬಗ್ಗೆ ಎಸ್ಐಟಿ ಮಾಹಿತಿ ನೀಡಿದ್ದು, ಡೆಬಿಡ್ ಕಾರ್ಟ್ ಮಹಿಳೆ ಇನ್ನೂ ಜೀವಂತವಾಗಿದ್ದಾಳೆ. ಆದರೇ ಪಾನ್ ಕಾರ್ಡ್ ವಾರಸುದಾರ ಅನಾರೋಗ್ಯದಿಂದ ಮೃತಪಟ್ಟಿದ್ದಾರೆ ಎಂದು ತಿಳಿಸುವ ಮೂಲಕ, ಡೆಬಿಟ್, ಪಾನ್ ಕಾರ್ಡ್ ಗೊಂದಲಕ್ಕೆ ತೆರೆ ಎಳೆದಿದೆ.
ಇನ್ನು ನಿನ್ನೆ 6ನೇ ಪಾಯಿಂಟ್ ನಲ್ಲಿ 12 ಮೂಳೆಗಳು ಪತ್ತೆಯಾಗಿವೆ, ಕೈ, ಕಾಲಿನ 2 ಮೂಳೆ ಸೇರಿದಂತೆ ಇತರೆ ಸಣ್ಣ ಮೂಳೆಗಳು ಪತ್ತೆಯಾಗಿವೆ, ಬುರಡೆಯ ಎರಡು ತುಂಡುಗಳು ಪತ್ತೆಯಾಗಿವೆ. ಮೂಳೆ, ಬುರುಡೆಯ ತುಂಡು ಸಂರಕ್ಷಿಸಿ ಎಫ್ ಎಸ್ ಎಲ್ ತಂಡ ತೆಗೆದುಕೊಂಡು ಹೋಗಿದೆ.
ಯಾವುದೇ ಸಾಕ್ಷ್ಯ ನಾಶವಾಗದಂತೆ ಎಸ್ ಐಟಿಯಿಂದ ಕಟ್ಟೆಚ್ಚರ ವಹಿಸಲಾಗಿದೆ, ಗುಂಡಿಯೊಳಗೆ ನೀರು ತುಂಬಿದರೆ ಸಾಕ್ಷ್ಯ ನಾಶವಾಗುವ ಆತಂಕದ ಹಿನ್ನೆಲೆಯಲ್ಲಿ 6ನೇ ಪಾಯಿಂಟ್ ಮೇಲ್ಭಾಗದಲ್ಲಿ ಶೀಟ್ ಅಳವಡಿಸಿ ಸಂರಕ್ಷಣೆ ಮಾಡಲಾಗುತ್ತಿದೆ.