August 24, 2025
WhatsApp Image 2025-08-16 at 10.02.11 AM

ಉಳ್ಳಾಲ: ಅಜ್ಮೀರ್ ದರ್ಗಾಕ್ಕೆ ತೆರಳಿದ್ದ ತೌಡುಗೋಳಿಯ ವ್ಯಕ್ತಿ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಶುಕ್ರವಾರ ಸಂಭವಿಸಿದೆ.

ನರಿಂಗಾನ ವರ್ಕಾಡಿ ಗಡಿ ಭಾಗ ತೌಡುಗೋಳಿಯ ನಿವಾಸಿ, 60 ವರ್ಷದ ಶೇಖಬ್ದುಲ್ಲ ಮೃತ ವ್ಯಕ್ತಿ. ಕಲ್ಲಾಪು ಗ್ಲೋಬಲ್ ಮಾರುಕಟ್ಟೆಯಲ್ಲಿ ಲಿಂಬೆ ಹಣ್ಣು ವ್ಯಾಪಾರಿಯಾಗಿದ್ದ ಶೇಖಬ್ದುಲ್ಲ ಮೂರು ದಿನಗಳ ಹಿಂದೆ ತನ್ನ ಮಿತ್ರರೊಂದಿಗೆ ಮಂಗಳೂರಿನಿಂದ ಅಜ್ಮಿರ್ ದರ್ಗಾ ಪ್ರವಾಸ ಕೈಗೊಂಡಿದ್ದರು. ಶುಕ್ರವಾರ ದರ್ಗಾ ದರ್ಶನ ಮುಗಿಸಿದ ಬಳಿಕ ಎದೆನೋವು ಕಂಡುಬಂದಿದ್ದು ಆಸ್ಪತ್ರೆಗೆ ದಾಖಲಿಸುವ ಮುನ್ನ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಶೇಖಬ್ದುಲ್ಲ ಅವರು ಕಳೆದ ನಲ್ವತ್ತು ವರ್ಷಗಳಿಂದ ಲಿಂಬೆ ಹಣ್ಣು ವ್ಯಾಪಾರಿಯಾಗಿದ್ದು ಪ್ರತಿ ವರ್ಷವೂ ಅಜ್ಮಿರ್ ಗೆ ಪ್ರವಾಸ ಕೈಗೊಳ್ಳುತ್ತಿದ್ದರು. ಎರಡು ವರ್ಷದ ಹಿಂದೆಯೂ ಅಜ್ಮಿರ್ ನಲ್ಲಿ ಹೃದಯಾಘಾತಕ್ಕೆ ಒಳಗಾಗಿದ್ದರೂ ತಕ್ಷಣ ಆಸ್ಪತ್ರೆಗೆ ದಾಖಲಿಸಿ ಅಲ್ಲಿಂದ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿ ಚೇತರಿಸಿಕೊಂಡಿದ್ದರು. ಶೇಖಬ್ದುಲ್ಲ ಅವರ ಪತ್ನಿ ಎರಡು ವರ್ಷದ ಹಿಂದೆಯಷ್ಟೇ ಸಾವನ್ನಪ್ಪಿದ್ದರು.  ಪತ್ನಿಯ ದಿಢೀರ್ ಸಾವು ಮಾನಸಿಕವಾಗಿ ಒಂದಷ್ಟು ಕುಗ್ಗಿಸಿದ್ದರೂ ಯಾರಿಗೂ ತೋರಿಸಿಕೊಳ್ಳದೆ ಧಾರ್ಮಿಕ ಹಾಗೂ ಸಾಮಾಜಿಕವಾಗಿ ತೊಡಗಿಸಿಕೊಳ್ಳುವ ಮೂಲಕ ಚೇತರಿಸಿಕೊಂಡಿದ್ದರು. ಶೇಖಬ್ದುಲ್ಲ ಅವರ ಮೃತ ದೇಹವನ್ನು ಅಜ್ಮಿರ್ ನಿಂದ ಶುಕ್ರವಾರ ಮಧ್ಯಾಹ್ನ ಅಂಬುಲೆನ್ಸ್ ಮೂಲಕ ಕರೆತರಲಾಗುತ್ತಿದ್ದು ಶನಿವಾರ ಮಧ್ಯರಾತ್ರಿ ಸ್ವಗೃಹಕ್ಕೆ ತಲುಪುವ ನಿರೀಕ್ಷೆ ಇದ್ದು ತೌಡುಗೋಳಿಯ ಮಸೀದಿಯ ದಫನ ಭೂಮಿಯಲ್ಲಿ ಅಂತ್ಯಕ್ರಿಯೆ ನೆರವೇರಲಿದೆ. ಶೇಖಬ್ದುಲ್ಲ ಅವರಿಗೆ ಇಬ್ಬರು ಪುತ್ರರು, ಪುತ್ರಿ ಇದ್ದಾರೆ.

About The Author

Leave a Reply