January 15, 2026
WhatsApp Image 2025-08-27 at 9.39.25 AM

ಕಾರ್ಕಳ: ಕುಂಟಲ್ಪಡಿಯಲ್ಲಿ ಮದ್ಯರಾತ್ರಿ ನಡೆದ ಕೊಲೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಪರೀಕ್ಷಿತ್ ಸಂಜೀವ್ ಗೌಡ ಬಂಧಿತ ಆರೋಪಿ.ನವೀನ್ ಪೂಜಾರಿ ಕೊಲೆಯಾದ ವ್ಯಕ್ತಿ.

ಆರೋಪಿ ಮತ್ತು ಕೊಲೆಯಾದ ವ್ಯಕ್ತಿ ಪರಿಚಿತರು.ಇಬ್ಬರೂ ವಿವಾಹಿತರಾಗಿದ್ದು ಬೇರೆ ಬೇರೆ ಕಾರಣಗಳಿಂದ ಪತ್ನಿಯೊಂದಿಗೆ ಮುನಿಸಿಕೊಂಡು ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು.

ಈ ಮಧ್ಯೆ ಆರೋಪಿ ಪರೀಕ್ಷಿತ್ ಸಂಜೀವ್ ಗೌಡನ ಗೆಳತಿಯೊಂದಿಗೆ ಕೊಲೆಯಾದ ನವೀನ್‌ ಪೂಜಾರಿ ಪರಿಚಯ ಮಾಡಿಕೊಂಡಿದ್ದು ಇತ್ತೀಚೆಗೆ ಆತ್ಮೀಯತೆ ಬೆಳೆದಿದೆ. ಅವರಿಬ್ಬರು ಆಪ್ತರಾಗಿರುವುದು ಸಹಿಸದ ಆರೋಪಿ ರಾತ್ರಿ ವೇಳೆ ಇರಿದು ಕೊಂಡಿದ್ದಾನೆ.ಈ ಸಂಬಂಧ ಸಾಕ್ಷ್ಯಗಳನ್ನು ಕಲೆಹಾಕಿ ಹೆಚ್ಚಿನ ಮಾಹಿತಿ ಪಡೆಯುತ್ತಿದ್ದೇವೆ.ಸದ್ಯ ಆರೋಪಿಯನ್ನು ಬಂಧಿಸಿದ್ದೇವೆ ಎಂದು ಉಡುಪಿ ಎಸ್ಪಿ ಹರಿರಾಂ ಶಂಕರ್ ಹೇಳಿದ್ದಾರೆ.

About The Author

Leave a Reply