

ಮಂಗಳೂರು : ಸೌದಿ ಅರಬಿಯಾದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಉಳ್ಳಾಲ ಮಿಲ್ಲತ್ ನಗರದ ನಿವಾಸಿ ಯುವಕ ಮೃತಪಟ್ಟಿದ್ದಾರೆ. ಮೃತನನ್ನು ಮಿಲ್ಲತ್ ನಗರ ನಿವಾಸಿ ಮುಹಮ್ಮದ್ ಎಂಬವರ ಪುತ್ರ ಅಬ್ದುಲ್ ರಾಝಿಕ್ (27) ಎಂದು ಗುರುತಿಸಲಾಗಿದೆ.
ಅಬ್ದುಲ್ ರಾಝಿಕ್ ಸೌದಿ ಅರೇಬಿಯಾದಲ್ಲಿ ಕೆಲಸದ ನಿಮಿತ್ತ ಬಸ್ ನಲ್ಲಿ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ. ಸೌದಿ ಅರೇಬಿಯಾದ ಜುಬೈಲ್ನ ಪಾಲಿಟೆಕ್ ಕಂಪನಿಯೊಂದರಲ್ಲಿ ಉದ್ಯೋಗದಲ್ಲಿದ್ದ ಅಬ್ದುಲ್ ರಾಝಿಕ್ ಸೆ.14ರಂದು ಸಂಜೆ ರಾತ್ರಿ ಪಾಳಿ ಕೆಲಸಕ್ಕೆಂದು ಕೆಲಸಕ್ಕೆಂದು ಬಸ್ನಲ್ಲಿ ತೆರಳುತ್ತಿದ್ದಾಗ ರಸ್ತೆ ಅಪಘಾತ ಸಂಭವಿಸಿದೆ. ಇವರು ಸಂಚರಿಸುತ್ತಿದ್ದ ಬಸ್ಸಿಗೆ ಇನ್ನೊಂದು ಬಸ್ ಢಿಕ್ಕಿ ಹೊಡೆದಿದೆ. ಇದರ ಪರಿಣಾಮವಾಗಿ ಗಂಭೀರವಾಗಿ ಗಾಯಗೊಂಡ ರಾಝಿಕ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮುಹಮ್ಮದ್ರ ಕೊನೆಯ ಪುತ್ರರಾಗಿರುವ ರಾಝಿಕ್, ಸಿವಿಲ್ ಇಂಜಿನಿಯರಿಂಗ್ ಪದವೀಧರರಾಗಿದ್ದು ನೌಕರಿಗಾಗಿ ವಿದೇಶಕ್ಕೆ ತೆರಳಿದ್ದರು. ಸೌದಿ ಅರಬಿಯಾದ ಜುಬೈಲ್ನಲ್ಲಿ ಪಾಲಿಟೆಕ್ ಎಂಬ ಕಂಪೆನಿಯಲ್ಲಿ ಉದ್ಯೋಗದಲ್ಲಿದ್ದ ಅವರು, ಕಳೆದ ಜುಲೈ 11ರಂದು ಊರಿಗೆ ಬಂದಿದ್ದರು. ಒಂದು ತಿಂಗಳ ರಜೆ ಮುಗಿಸಿ ಆಗಸ್ಟ್ 15ರಂದು ಎರಡನೇ ಬಾರಿ ವಿದೇಶಕ್ಕೆ ತೆರಳಿದ್ದರು. ತಂದೆ ತಾಯಿ, ಮೂವರು ಸಹೋದರಿಯರು, ಒಬ್ಬ ಸಹೋದರನನ್ನು ಅಗಲಿದ್ದಾರೆ.






