October 12, 2025
WhatsApp Image 2025-10-07 at 8.54.35 AM

ಬೆಂಗಳೂರು ವಿಶ್ವವಿದ್ಯಾನಿಲಯದ 60ನೇ ವಾರ್ಷಿಕ ಘಟಿಕೋತ್ಸವದಲ್ಲಿ ಕರ್ನಾಟಕ ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಸಹಿತ ಮೂವರು ಗೌರವ ಡಾಕ್ಟರೇಟ್ ಪದವಿ ಪಡೆಯಲಿದ್ದಾರೆ. 

ವಿಧಾನ ಪರಿಷತ್ ಮಾಜಿ ಸದಸ್ಯ ಹಾಗೂ ಸಮಾಜಸೇವಕ ಡಿ. ಮಾದೇಗೌಡ ಹಾಗೂ ಜೆ.ಪಿ. ಅಗ್ರಿ ಜೆನೆಟಿಕ್ಸ್ ಪ್ರೈವೇಟ್ ಲಿಮಿಟೆಡ್ ನ ಸಂಸ್ಥಾಪಕ ಹಾಗೂ ವ್ಯವಸ್ಥಾಪಕ ನಿರ್ದೇಶಕರಾಗಿರುವ ಡಾ.ಟಿ.ಬಿ.ಪ್ರಸನ್ನ ಗೌರವ ಡಾಕ್ಟರೇಟ್ ಪದವಿ ಪಡೆಯುವ ಇನ್ನಿಬ್ಬರು ಸಾಧಕರಾಗಿದ್ದಾರೆ.

ಅ.8ರಂದು ಪೂರ್ವಾಹ್ನ 11:30ಕ್ಕೆ ಬೆಂಗಳೂರಿನ ಅರಮನೆ ರಸ್ತೆಯಲ್ಲಿರುವ ಸೆಂಟ್ರಲ್ ಕಾಲೇಜು ಆವರಣದಲ್ಲಿ ಜರುಗುವ ಘಟಿಕೋತ್ಸವದಲ್ಲಿ ಈ ಮೂವರಿಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನ ನಡೆಯಲಿದೆ.

About The Author

Leave a Reply