

ತುಮಕೂರು: ಜಿಲ್ಲೆಯ ಕುಣಿಗಲ್ ತಾಲೂಕಿನ ಯಡಿಯೂರು ಬಳಿ ಯಮಾರ್ಕೋನಹಳ್ಳಿ ಡ್ಯಾಂನಲ್ಲಿ ಇಂದು ಭಾರೀ ದುರಂತ ಸಂಭವಿಸಿದೆ. ಈಜಲು ಹೋಗಿದ್ದ ಒಂದೇ ಕುಟುಂಬದ ಆರು ಮಂದಿ ನೀರುಪಾಲಾಗಿದ್ದಾರೆ. ಒಟ್ಟಾರೆ ಏಳು ಮಂದಿ ಇದ್ದು, ಇದರಲ್ಲಿ ಓರ್ವನನ್ನು ರಕ್ಷಣೆ ಮಾಡಲಾಗಿದೆ.
ಸದ್ಯಕ್ಕೆ ಇಬ್ಬರ ಮೃತದೇಹ ಪತ್ತೆಯಾಗಿದ್ದು, ಉಳಿದವರಿಗೆ ರಕ್ಷಣೆ ಕಾರ್ಯ ಮುಂದುವರೆದಿದೆ. ಇವರು ತುಮಕೂರು ನಗರದ ಬಿ.ಜಿ.ಪಾಳ್ಯದ ನಿವಾಸಿಗಳಾಗಿದ್ದಾರೆ. ಸಾಜಿಯಾ, ಅರ್ಬಿನ್ ಎಂಬುವವರ ಶವ ಸಿಕ್ಕಿದ್ದು, ಶಬಾನ (44), ತಬಾಸುಮ್ (45), ಮಹಿಬ್ (1) ಮತ್ತು ಮಿಫ್ರಾ (4) ಕಣ್ಮರೆಯಾದವರು.
ಈ ನಡುವೆ ನವಾಜ್ ಎಂಬಾತ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಅವನಿಗೆ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಘಟನೆ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಹುಲಿಯೂರುದುರ್ಗ ಪೊಲೀಸರು ಹಾಗೂ ಅಮೃತೂರು ಪೊಲೀಸರು ಬಂದಿದ್ದು, ಪರಿಶೀಲನೆ ನಡೆಸಿದ್ದಾರೆ.