October 20, 2025
WhatsApp Image 2025-10-16 at 2.39.17 PM

ಬೆಂಗಳೂರು : ರಾಜ್ಯದಲ್ಲಿ ಆರ್ ಎಸ್ ಎಸ್ ಚಟುವಟಿಕೆಗಳಿಗೆ ನಿಷೇಧ ಇರುವಂತೆ ಸಚಿವ ಪ್ರಿಯಾಂಕ ಖರ್ಗೆ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದ ಬೆನ್ನೆಲೆ ಅವರಿಗೆ ಸಾಕಷ್ಟು ನಿರಂತರ ಬೆದರಿಕೆ ಕರೆಗಳು ಬಂದವು ಇದೀಗ ಬೆದರಿಕೆ ಹಾಕಿದ್ದ ಆರೋಪಿಯನ್ನು ಪೊಲೀಸರು ಮಹಾರಾಷ್ಟ್ರದ ಲಾತೂರ್ ನಲ್ಲಿ ಅರೆಸ್ಟ್ ಮಾಡಿದ್ದಾರೆ.

ಹೌದು ಸಚಿವ ಪ್ರಿಯಾಂಕ ಖರ್ಗೆಗೆ ಬೆದರಿಕೆ ಹಾಕಿದ ಆರೋಪಿ ಅರೆಸ್ಟ್ ಆಗಿದ್ದಾನೆ. ಸೊಲ್ಲಾಪುರ ಮೂಲದ ದಿನೇಶ್ ನರಣಿ ಎನ್ನುವ ಆರೋಪಿಯನ್ನು ಇದೀಗ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಮಹಾರಾಷ್ಟ್ರದ ಲಾತೂರ್ನಲ್ಲಿ ಪೊಲೀಸರು ಆರೋಪಿಯನ್ನು ಅರೆಸ್ಟ್ ಮಾಡಿದ್ದಾರೆ. ಬೆದರಿಕೆ ಕರೆ ಬಳಿಕ ಸೋಲಾಪುರದಿಂದ ಲಾತುರ್ಗೆ ಆರೋಪಿ ಪರಾರಿಯಾಗಿದ್ದ.

ಇದೀಗ ಲಾತೂರ್ ನಲ್ಲಿ ಆರೋಪಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬೆಂಗಳೂರು ಕಲ್ಬುರ್ಗಿ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿದ್ದು, ಇಂದು ರಾತ್ರಿ ವೇಳೆ ಆರೋಪಿಯನ್ನು ಬೆಂಗಳೂರಿಗೆ ಕರೆತರುವ ಸಾಧ್ಯತೆ ಇದೆ. ಸದಾಶಿವನಗರ ಠಾಣೆಗೆ ಆರೋಪಿಯನ್ನು ಕರೆದಿರುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.

ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿರುವ ಸಚಿವ ಪ್ರಿಯಾಂಕ್ ಖರ್ಗೆ ” RSS ಯುವಕರ, ಮಕ್ಕಳ ಮನಸುಗಳಲ್ಲಿ ಕಲ್ಮಶ ತುಂಬುವ ಕೆಲಸ ಮಾಡುತ್ತಿದೆ ಎಂದಿದ್ದೆ, ಅವರು ತುಂಬಿದ ಕಲ್ಮಶವು ಹೇಗಿರುತ್ತದೆ ಎಂಬುದಕ್ಕೆ ಸಣ್ಣ ಉದಾಹರಣೆ ಇಲ್ಲಿದೆ.. ಕೆಲವು ದಿನಗಳಿಂದ ನನಗೆ ನಿರಂತರವಾಗಿ ಬರುತ್ತಿದ್ದ ಬೆದರಿಕೆ ಮತ್ತು ನಿಂದನೆಯ ಕರೆಗಳಲ್ಲಿ ಇದೊಂದು ಸ್ಯಾಂಪಲ್ ಅಷ್ಟೇ. ತಾಯಿ, ಸಹೋದರಿಯರ ಹೆಸರು ಹಿಡಿದು ಅತ್ಯಂತ ತುಚ್ಚವಾಗಿ ನಿಂದಿಸುವುದೇ ಶಾಖೆಗಳಲ್ಲಿ ನೀಡುವ ಸಂಸ್ಕಾರವೇ?

ಮೋದಿ ಹಾಗೂ ಮೋಹನ್ ಭಾಗವತ್ ಅವರ ತಾಯಿಯಂದಿರಿಗೆ ಇದೇ ಬಗೆಯಲ್ಲಿ ನಿಂದಿಸುವುದನ್ನು ಮುಂತಾದ ಬಿಜೆಪಿ ನಾಯಕರು ಒಪ್ಪುತ್ತಾರೆಯೇ? ಬಿಜೆಪಿ ನಾಯಕರ ಮಕ್ಕಳು ತಮ್ಮ ಭವ್ಯ ಭವಿಷ್ಯ ರೂಪಿಸಿಕೊಳ್ಳುತ್ತಿದ್ದಾರೆ, ಬಡವರ ಮಕ್ಕಳನ್ನು ಹೀಗೆ ನಿಂದಿಸುವುದಕ್ಕೆ, ಬೆದರಿಸುವುದಕ್ಕೆ ಮತ್ತು ಬಲಿಯಾಗುವುದಕ್ಕೆ ಬಳಸಿಕೊಳ್ಳುತ್ತಿದ್ದಾರೆ. ನಾನು ದೂರು ನೀಡಿದರೆ ಆ ವ್ಯಕ್ತಿಯ ಬದುಕಿನಲ್ಲಿ ಹಾನಿಯಾಗುತ್ತದೆಯೇ ಹೊರತು ಆತನನ್ನು ಇಂತಹ ಮನಸ್ಥಿತಿಗೆ ತಳ್ಳಿದವರಿಗೆ ಯಾವ ಹಾನಿಯೂ ಆಗುವುದಿಲ್ಲ ಎಂದಿದ್ದಾರೆ.

ನಮ್ಮದು ವ್ಯಕ್ತಿಗಳ ವಿರುದ್ಧದ ಹೋರಾಟವಲ್ಲ, RSS ಪಸರಿಸುತ್ತಿರುವ ಈ ಕೊಳಕು ಮನಸ್ಥಿತಿಯ ವಿರುದ್ಧದ ಹೋರಾಟ, ಮುಗ್ದರನ್ನು ಬ್ರೈನ್ ವಾಶ್ ಮಾಡಿ ಅವರ ಚಿಂತನೆಗಳನ್ನು ಕಲುಷಿತಗೊಳಿಸುತ್ತಿರುವ ಕ್ಷುದ್ರ ಶಕ್ತಿಗಳ ವಿರುದ್ಧದ ಹೋರಾಟ. RSS ನ ಕಾಲಾಳುಗಳಾಗಿರುವ ಜನರನ್ನು ವಿಕಾರಧಾರೆಯಿಂದ ವಿಚಾರಧಾರೆಯೆಡೆಗೆ ಕರೆತರಬೇಕಿದೆ, ಬುದ್ಧ, ಬಸವ, ಅಂಬೇಡ್ಕರ್ ಅವರ ಮೌಲ್ಯಯುತ ಚಿಂತನೆಗಳನ್ನು ಪರಿಚಯಿಸಬೇಕಿದೆ.

ಮುಗ್ದ ಮಕ್ಕಳು, ಯುವ ಸಮುದಾಯವನ್ನು ಇಂತಹ ಕಲುಷಿತ ವ್ಯವಸ್ಥೆಗೆ ಬಲಿಯಾಗದಂತೆ ತಡೆಯುವ ಸಲುವಾಗಿಯೇ ನಾನು ಹೋರಾಡುತ್ತೇನೆ ಮತ್ತು ದೃಢವಾದ ಹೆಜ್ಜೆಗಳನ್ನು ಇಡುತ್ತೇನೆ. ಈ ಬೆದರಿಕೆಗಳು, ಬೈಗುಳಗಳಿಂದ ನಾನು ವಿಚಲಿತನಾಗುತ್ತೇನೆ ಎಂದು ಭಾವಿಸಿದ್ದರೆ ಅದು ಅವರ ಭ್ರಮೆಯಷ್ಟೇ. ನನ್ನದು ಕೇವಲ ಅಧಿಕಾರ ಕೇಂದ್ರಿತ ರಾಜಕಾರಣವಲ್ಲ, ಸೈದ್ದಾಂತಿಕ ರಾಜಕಾರಣ, ಮುಗ್ದ ಯುವ ಸಮುದಾಯವನ್ನು ವಿಷವರ್ತುಲದಿಂದ ಹೊರತರುವ ಜನಕೇಂದ್ರಿತ ರಾಜಕಾರಣ ಎಂದು ಅವರು ಟ್ವೀಟ್ ಮಾಡಿದ್ದಾರೆ.

RSS ಯುವಕರ, ಮಕ್ಕಳ ಮನಸುಗಳಲ್ಲಿ ಕಲ್ಮಶ ತುಂಬುವ ಕೆಲಸ ಮಾಡುತ್ತಿದೆ ಎಂದಿದ್ದೆ, ಅವರು ತುಂಬಿದ ಕಲ್ಮಶವು ಹೇಗಿರುತ್ತದೆ ಎಂಬುದಕ್ಕೆ ಸಣ್ಣ ಉದಾಹರಣೆ ಇಲ್ಲಿದೆ..

ಕೆಲವು ದಿನಗಳಿಂದ ನನಗೆ ನಿರಂತರವಾಗಿ ಬರುತ್ತಿದ್ದ ಬೆದರಿಕೆ ಮತ್ತು ನಿಂದನೆಯ ಕರೆಗಳಲ್ಲಿ ಇದೊಂದು ಸ್ಯಾಂಪಲ್ ಅಷ್ಟೇ.

ತಾಯಿ, ಸಹೋದರಿಯರ ಹೆಸರು ಹಿಡಿದು ಅತ್ಯಂತ ತುಚ್ಚವಾಗಿ… pic.twitter.com/KqnSsiLWl6

— Priyank Kharge / ಪ್ರಿಯಾಂಕ್ ಖರ್ಗೆ (@PriyankKharge) October 15, 2025

About The Author

Leave a Reply