November 7, 2025
WhatsApp Image 2025-11-07 at 12.17.27 PM

ಮಂಗಳೂರು:  ಉದ್ಯಮಿಯ ಪುತ್ರನ ಮೃತ ದೇಹ ನದಿಯಲ್ಲಿ ಪತ್ತೆಯಾಗಿದೆ ಶಾಂಭವಿ ನದಿ ತೀರದಲ್ಲಿ ಅಭಿಷೇಕ್ ಆಳ್ವ (29) ಮೃತದೇಹ ಪತ್ತೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿ ತಾಲೂಕಿನ ಬಪ್ಪನಾಡು ಬಳಿ ಒಂದು ಘಟನೆ ನಡೆದಿದೆ.

ಮುಲ್ಕಿ ಬಳಿ ಶಾಂಭವಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ನವೀನ್ ಚಂದ್ರ ಆಳ್ವಪುತ್ರ ಅಭಿಷೇಕ ಆಳ್ವ ಮೃತದೇಹ ಪತ್ತೆಯಾಗಿದೆ. ನವೆಂಬರ್ 5ರಂದು ಮುಲ್ಕಿ ಬಪ್ಪನಾಡು ಬ್ರಿಡ್ಜ್ ಬಳಿ ಕಾರು ನಿಲ್ಲಿಸಿ ಅಭಿಷೇಕ್ ನಾಪತ್ತೆಯಾಗಿದ್ದ. ಇಂದು ಬೆಳಿಗ್ಗೆ ಬಪ್ಪನಾಡು ಸಮೀಪ ನದಿ ತೀರದಲ್ಲಿ ಮೃತದೇಹ ಪತ್ತೆಯಾಗಿದೆ.

ಮೃತ ಅಭಿಷೇಕ್ ತನ್ನ ತಂದೆಯ ಉದ್ಯಮವನ್ನು ಮುನ್ನಡೆಸುತ್ತಿದ್ದ ಎನ್ನುವ ಮಾಹಿತಿ ಲಭ್ಯವಾಗಿದ್ದು, ತಿರುವೈಲು ಗುತ್ತು ಕರಾವಳಿ ಕಂಬಳದಲ್ಲಿ ಈ ಒಂದು ಮನೆತನ ಗುರುತಿಸಿಕೊಂಡಿದ್ದು, ಅಭಿಷೇಕ್ ನಾಪತ್ತೆ ಕುರಿತು ಪಡುಬಿದ್ರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು . ಇದೀಗ ಮೃತದೇಹ ಪತ್ತೆಯಾಗಿದ್ದು ಮಂಗಳೂರಿನ ಮುಲ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

About The Author

Leave a Reply