November 24, 2025
WhatsApp Image 2025-11-09 at 11.45.02 AM

ಹೃದಯಾಘಾತದಿಂದ ಲಾರಿಯಲ್ಲೇ ಚಾಲಕರೊಬ್ಬರು ಮೃತಪಟ್ಟ ಘಟನೆ ಕುಂದಾಪುರದಲ್ಲಿ ನಡೆದಿದೆ.

ಗಂಗೊಳ್ಳಿ ತ್ರಾಸಿ ಗ್ರಾಮದ ಶ್ರೀ ಗಜಾನನ ಗ್ಯಾರೇಜ್ ಎದುರು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಘಟನೆ ನಡೆದಿದ್ದು, ಮೃತ ಚಾಲಕ ಮನ್ಸೂರ್ ಅಲಿ (50) ದಾವಣಗೆರೆ ಮೂಲದವರು ಎನ್ನಲಾಗಿದೆ. ನವೆಂಬರ್ 6ರಂದು ರಾತ್ರಿ ಲಾರಿ ಚಾಲನೆ ಮಾಡಿಕೊಂಡು ದಾವಣಗೆರೆಯಿಂದ ಮಂದಾರ್ತಿಯ ಲಕ್ಷ್ಮಿ ಫೀಡ್ಸ್ ಕಾರ್ಖಾನೆಗೆ ಬಂದಿದ್ದ ಅವರು ದಾರಿ ಮಧ್ಯೆ ಲಾರಿ ನಿಲ್ಲಿಸಿ ಮಲಗಿದ್ದಾರೆ. ಈ ವೇಳೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ಶಂಕಿಸಲಾಗಿದೆ.

ನವೆಂಬರ್ 7ರಂದು ಸಂಜೆ ಲಾರಿ ಬಳಿ ಹೋಗಿ ನೋಡಿದಾಗ ಮನ್ಸೂರ್ ಅಲಿ ಮೃತಪಟ್ಟಿರುವುದು ಕಂಡುಬಂದಿದ್ದು, ಗಂಗೊಳ್ಳಿ ಠಾಣೆ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಗಂಗೊಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

About The Author

Leave a Reply