

ಮೈಸೂರು: ಬಲೂನ್ ಗೆ ತುಂಬುವ ಹೀಲಿಯಂ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಮೂವರು ಸಾವನ್ನಪ್ಪಿದ್ದು, ಐದು ಮಂದಿ ಗಂಭೀರ ಗಾಯಗೊಂಡಿರುವ ಘಟನೆ ಮೈಸೂರು ಅರಮನೆಯ ಮುಂಭಾಗ ನಡೆದಿದೆ.
ಅರಮನೆಯ ಜಯ ಮಾರ್ತಾಂಡ ಗೇಟ್ ಬಳಿ ಬಲೂನ್ಗೆ ಗ್ಯಾಸ್ ತುಂಬುವ ವೇಳೆ ಬ್ಲಾಸ್ಟ್ ಆಗಿದ್ದು, ತೀವ್ರತೆಗೆ ದೇಹಗಳು ಛಿದ್ರ ಛಿದ್ರಗೊಂಡಿದೆ. ಘಟನೆಯಲ್ಲಿ ಐದು ಮಂದಿಯ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಅರಮನೆ ಹೊರಗಡೆ ಯುವಕನೊಬ್ಬ ಸೈಕಲ್ ನಲ್ಲಿ ಬಲೂನ್ ಮಾರುತ್ತಿದ್ದು, ಗ್ಯಾಸ್ ತುಂಬಿಸುವ ವೇಳೆ ಬ್ಲಾಸ್ಟ್ ಆಗಿದೆ. ಘಟನೆಯಲ್ಲಿ ಬಲೂನ್ ಮಾರುವ ಯುವಕ ಸೇರಿ ಮೂವರು ಸಾವನ್ನಪ್ಪಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಅರಮನೆ ಆವರಣದಲ್ಲಿ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.






