March 13, 2026
WhatsApp Image 2026-02-17 at 3.06.48 PM

ಉಳ್ಳಾಲ: ಅತಿ ವೇಗದ ಚಾಲನೆಯಿಂದಾಗಿ ನಿಯಂತ್ರಣ ತಪ್ಪಿದ ಬೈಕು ರಸ್ತೆ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ ಕಾಂಕ್ರೀಟ್ ಕಂಬ ಅರ್ಧದಿಂದ ತುಂಡಾಗಿ ಬಿದ್ದಿದ್ದು ಬೈಕ್ ಸವಾರಿ ಮಾಡುತ್ತಿದ್ದ ವಿದ್ಯಾರ್ಥಿಗಳಿಬ್ಬರು ಪವಾಡ ಸದೃಶ ಪಾರಾದ ಘಟನೆ ಉಳ್ಳಾಲ ತಾಲೂಕಿನ ಕಿನ್ಯ ಸಂಕೇಶ ಎಂಬಲ್ಲಿ ಸೋಮವಾರ ಸಂಜೆ ನಡೆದಿದೆ.

ಬೈಕ್ ನೇರವಾಗಿ ಬಂದು ವಿದ್ಯುತ್ ಕಂಬಕ್ಕೆ ಢಿಕ್ಕಿಯಾಗಿದ್ದು ಇದರ ರಭಸಕ್ಕೆ ಕಂಬ ತುಂಡಾಗಿ ತಂತಿ ಸಮೇತ ಬಿದ್ದಿದೆ. ಕೂಡಲೇ ಜನ ಸೇರಿದರೂ ವಿದ್ಯುತ್ ಪ್ರವಹಿಸಬಹುದೆಂಬ ಭಯದಿಂದ ಯಾರೂ ಹತ್ತಿರಕ್ಕೆ ಹೋಗಿಲ್ಲ. ಅವರು ಒಂದಷ್ಟು ಹೊತ್ತು ಹೊರಳಾಡಿದ್ದಾರೆ. ಆದರೆ ಕಂಬ ಉರುಳುತ್ತಲೇ ವಿದ್ಯುತ್ ಲೈನ್ ಕಟ್ ಆಗಿದ್ದರಿಂದ ಯಾವುದೇ ಅಪಾಯ ಸಂಭವಿಸಿಲ್ಲ ಎಂದು ವರದಿ ಮೂಲಕ ತಿಳಿದು ಬಂದಿದೆ.

About The Author

Leave a Reply