February 20, 2026
WhatsApp Image 2026-02-20 at 1.19.42 PM

ಬೆಂಗಳೂರು : ಮೋಸ್ಟ್‌ ವಾಂಟೆಡ್‌ ಉಗ್ರ ಜುನೈದ್‌ ಅಹಮ್ಮದ್‌ ಸುಳಿವು ನೀಡಿದವರಿಗೆ 5 ಲಕ್ಷ ರೂ. ಬಹುಮಾನ ನೀಡುವುದಾಗಿ NIA ಘೋಷಿಸಿದೆ.ಕಳೆದ ಮೂರು ವರ್ಷದಿಂದ ಎನ್‌ಐಎ ಅಧಿಕಾರಿಗಳು ದೇಶ, ಹೊರದೇಶದಲ್ಲಿ ಹುಡುಕಾಟ ನಡೆಸುತ್ತಿದ್ದಾರೆ. ಮೋಸ್ಟ್ ವಾಂಟೆಡ್ ಉಗ್ರ ಜುನೈದ್ ಅಹಮದ್ ಗಾಗಿ ಹುಡುಕಾಟ ನಡೆಸಲಾಗುತ್ತಿದೆ. ಶಂಕಿತ ಉಗ್ರ ಜುನೈದ್ ಬಗ್ಗೆ ಸುಳಿವು ಸಿಕ್ಕಿಲ್ಲ. ಹಾಗಾಗಿ, ಉಗ್ರನ ಸುಳಿವು ಕೊಟ್ಟರೆ 5 ಲಕ್ಷ ರೂ. ಬಹುಮಾನ ನೀಡುವುದಾಗಿ ಘೋಷಣೆ ಮಾಡಿದ್ದಾರೆ.

ಈ ಹಿಂದೆ ರಕ್ತಚಂದನ ಕೇಸ್‌ನಲ್ಲಿ ಬಂಧನವಾಗಿದ್ದ ಜುನೇದ್‌ ಅಹ್ಮದ್. ನಂತರ ಜೈಲಿನಲ್ಲಿ ಟಿ.ನಾಸೀರ್‌ನಿಂದ ಪ್ರೇರಿತನಾಗಿ ಉಗ್ರ ಸಂಘಟನೆ ಸೇರಿದ್ದ. ಜೈಲಿನಿಂದ ಬಿಡುಗಡೆಯಾಗಿ ದುಬೈ ಹೋಗಿ ಅಲ್ಲಿಂದ ಸಹಚರಿಗೆ ಶಸ್ತ್ರಾಸ್ತ್ರ ಪೂರೈಕೆ ಮಾಡಿರುವ ಆರೋಪ ಇದೆ. ಬೆಂಗಳೂರು ನಾಗಶೆಟ್ಟಿ ಹಳ್ಳಿ ನಿವಾಸಿಯಾಗಿದ್ದ ಜುನೇದ್‌ ಅಹ್ಮದ್. ಸದ್ಯ ನಗರದಾದ್ಯಂತ ಎನ್‌ಐಎ ಪೊಲೀಸರು ವಾಂಟೆಡ್ ಪೋಸ್ಟರ್ ಅಂಟಿಸುತ್ತಿದ್ದಾರೆ.

ನಗರದ ಜನನಿಬಿಡ ಪ್ರದೇಶ ಮೆಜೆಸ್ಟಿಕ್ ಪ್ರತಿ ಕಂಬಗಳಿಗೂ, ವಾಂಟೆಡ್‌ ಉಗ್ರನ ಬಗ್ಗೆ ಮಾಹಿತಿ ನೀಡಿದರೆ 5 ಲಕ್ಷ ಬಹುಮಾನ ಕೊಡುವುದಾಗಿ ಪೋಸ್ಟರ್ ಹಾಕಿದ್ದಾರೆ. 2023 ರಲ್ಲಿ ಸಿಸಿಬಿ ಪೊಲೀಸರು ಭೇದಿಸಿದ ಉಗ್ರ ಸಂಚಿನ ಪ್ರಕರಣದ ಪ್ರಮುಖ ರೂವಾರಿ ಜುನೈದ್ ಅಮಹ್ಮದ್. ಉಗ್ರ ತನ್ನ ಮನೆಯಲ್ಲಿ ಶಸ್ತ್ರಾಸ್ತ್ರಗಳು, ಮದ್ದುಗುಂಡುಗಳು ಹಾಗೂ ಸ್ಫೋಟಕಗಳನ್ನ ವಶಪಡಿಸಿಕೊಂಡ ಪ್ರಕರಣದಲ್ಲಿ ಬೇಕಾಗಿರುವ ಉಗ್ರ.

About The Author

Leave a Reply