

ತಮಿಳುನಾಡು : ತಿರುಪ್ಪೂರು ಜಿಲ್ಲೆಯ ಪಲ್ಲಡಂ ಸಮೀಪದ ಲಕ್ಷ್ಮಿ ಮಿಲ್ಸ್ ಬಳಿ ಬಲವಾದ ಗಾಳಿಗೆ ಖಾಸಗಿ ಜಾಹೀರಾತು ಬ್ಯಾನರ್ ಹರಿದು ದ್ವಿಚಕ್ರ ವಾಹನ ಸವಾರನ ಮೇಲೆ ಬಿದ್ದ ಘಟನೆ ಇಂದು ಸಂಜೆ ನಡೆದಿದೆ.
ಕೊಯಮತ್ತೂರಿನಿಂದ ಪಲ್ಲಡಂಗೆ ಹೋಗುವ ರಸ್ತೆಯಲ್ಲಿ ಸಂಜೆ ಇದ್ದಕ್ಕಿದ್ದಂತೆ ಬಿರುಗಾಳಿ ಬೀಸಿದೆ. ಈ ವೇಳೆ ರಸ್ತೆಬದಿಯಲ್ಲಿದ್ದ ಬೃಹತ್ ಬ್ಯಾನರ್ ಮುರಿದು ದ್ವಿಚಕ್ರ ವಾಹನ ಸವಾರನ ಮುಂದೆ ಬಿದ್ದಿದೆ. ಇದರಿಂದಾಗಿ ನಿಯಂತ್ರಣ ತಪ್ಪಿದ ಸವಾರ ವಾಹನದೊಂದಿಗೆ ರಸ್ತೆಗೆ ಬಿದ್ದಿದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸವಾರನಿಗೆ ಯಾವುದೇ ದೊಡ್ಡ ಗಾಯಗಳಾಗಿಲ್ಲ ಎಂದು ವರದಿಯಾಗಿದೆ.

ಈ ಘಟನೆಯ ದೃಶ್ಯಗಳು ಸಿಸಿಟಿವಿ ಮತ್ತು ಸಾರ್ವಜನಿಕರ ಫೋನ್ನಲ್ಲಿ ದಾಖಲಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ನಿಯಮಗಳನ್ನು ಉಲ್ಲಂಘಿಸಿ ಅಳವಡಿಸಲಾಗುವ ಬ್ಯಾನರ್ಗಳು ಸಾರ್ವಜನಿಕರ ಜೀವಕ್ಕೆ ಸಂಚಕಾರ ತರುತ್ತಿವೆ ಎಂದು ಸಾಮಾಜಿಕ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಳೆಗಾಲ ಮತ್ತು ಗಾಳಿಯ ಸಮಯದಲ್ಲಿ ಇವುಗಳ ಸುರಕ್ಷತೆಯನ್ನು ಮೇಲ್ವಿಚಾರಣೆ ಮಾಡಬೇಕೆಂದು ಅಧಿಕಾರಿಗಳನ್ನು ಒತ್ತಾಯಿಸಲಾಗಿದೆ.






