May 26, 2026
police-5-1

ಕೊಯಮತ್ತೂರು: ಸುಲೂರಿನಲ್ಲಿ 10 ವರ್ಷದ ಬಾಲಕಿಯ ಮೇಲಿನ ಲೈಂಗಿಕ ದೌರ್ಜನ್ಯ ಮತ್ತು ಕೊಲೆ ಪ್ರಕರಣವನ್ನು ತಮಿಳುನಾಡು ಸರ್ಕಾರ ನಿರ್ವಹಿಸಿದ ರೀತಿಗೆ ಸಂಬಂಧಿಸಿದಂತೆ ಎರಡು ದೊಡ್ಡ ವಿವಾದಗಳು ಮುನ್ನೆಲೆಗೆ ಬಂದಿದ್ದು, ಹೊಸದಾಗಿ ಆಯ್ಕೆಯಾಗಿರುವ ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ನೇತೃತ್ವದ ಸರ್ಕಾರವನ್ನು ತೀವ್ರ ಸಂಕಷ್ಟಕ್ಕೆ ಸಿಲುಕಿಸಿವೆ.ಮಗುವಿನ ಹತ್ಯೆಯ ಇಂತಹ ಸೂಕ್ಷ್ಮ ಪ್ರಕರಣದ ಕುರಿತು ಮಾತನಾಡುವಾಗ ಕೈಗಾರಿಕಾ ಸಚಿವೆ ಎಸ್. ಕೀರ್ತನಾ ಹಾಗೂ ರಾಜ್ಯದ ಹಿರಿಯ ಪೊಲೀಸ್ ಅಧಿಕಾರಿಗಳು ಜಂಟಿ ಪತ್ರಿಕಾಗೋಷ್ಠಿಯಲ್ಲಿ ನಗುತ್ತಾ ಬೇಜವಾಬ್ದಾರಿತನ ಪ್ರದರ್ಶಿಸಿರುವುದು ಸಾರ್ವಜನಿಕರು ಹಾಗೂ ವಿರೋಧ ಪಕ್ಷಗಳ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.ಸಚಿವೆ ಮತ್ತು ಐಪಿಎಸ್ ಅಧಿಕಾರಿಗಳ ನಗು ಸೋಷಿಯಲ್ ಮೀಡಿಯಾದಲ್ಲಿ ವೈರಲ್:ಮೊದಲನೆಯದಾಗಿ, ಬಾಲಕಿಯ ಕೊಲೆ ಪ್ರಕರಣದ ಬಗ್ಗೆ ಪ್ರಶ್ನಿಸಿದಾಗ ತಮಿಳುನಾಡು ಕೈಗಾರಿಕಾ ಸಚಿವೆ ಎಸ್. ಕೀರ್ತನಾ ಅವರು ನಗುತ್ತಿರುವುದು ಮಾಧ್ಯಮಗಳಲ್ಲಿ ಪ್ರಸಾರವಾಗಿ ಬಿಜೆಪಿಯಿಂದ ತೀವ್ರ ಟೀಕೆಗೆ ಗುರಿಯಾಗಿದ್ದರು. ತದನಂತರ, ಮಾಧ್ಯಮ ಸಂವಾದ ಮುಗಿದ ಬಳಿಕ ತಾನು ನಕ್ಕಿದ್ದಾಗಿ ಸಚಿವೆ ಸ್ಪಷ್ಟನೆ ನೀಡಿದ್ದಾರೆ. ಆದರೆ, ವಿವಾದ ಇಲ್ಲಿಗೆ ನಿಲ್ಲದೆ, ಪ್ರಕರಣದ ತನಿಖೆ ನಡೆಸುತ್ತಿರುವ ಹಿರಿಯ ಪೊಲೀಸ್ ಅಧಿಕಾರಿಗಳದ್ದೇ ಮತ್ತೊಂದು ವೀಡಿಯೊ ಲೀಕ್ ಆಗಿ ಆಕ್ರೋಶದ ಬೆಂಕಿ ಹೆಚ್ಚಿಸಿದೆ.ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸುವ ಮುನ್ನ, ಪಶ್ಚಿಮ ವಲಯದ ಪೊಲೀಸ್ ಮಹಾನಿರ್ದೇಶಕಿ (IGP) ಆರ್.ವಿ. ರಮ್ಯಾ ಭಾರತಿ ಅವರು ಕೊಯಮತ್ತೂರು ರೇಂಜ್ ಡಿಐಜಿ ಪಿ. ಸಾಮಿನಾಥನ್ ಮತ್ತು ಕೊಯಮತ್ತೂರು ಎಸ್ಪಿ ಅಲ್ಲತಿಪಲ್ಲಿ ಪವನ್ ಕುಮಾರ್ ರೆಡ್ಡಿ ಅವರೊಂದಿಗೆ ನಗುತ್ತಾ, ಬೆರಳುಗಳನ್ನು ಉಜ್ಜುತ್ತಾ ತಮಾಷೆ ಮಾಡುತ್ತಿರುವ ದೃಶ್ಯ ವೀಡಿಯೊದಲ್ಲಿ ಸೆರೆಯಾಗಿದೆ. ಈ ಐಪಿಎಸ್ ಅಧಿಕಾರಿಗಳ ವರ್ತನೆಗೆ ಸೋಷಿಯಲ್ ಮೀಡಿಯಾದಲ್ಲಿ ಜನ ಉಗಿಯುತ್ತಿದ್ದರೂ, ಪೊಲೀಸ್ ಇಲಾಖೆ ಇನ್ನೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

About The Author

Leave a Reply