

ಪುತ್ತೂರು: ಕಳ್ಳತನ ಪ್ರಕರಣವೊಂದರ ಸಂಬಂಧ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯೋರ್ವನನ್ನು ವಿಟ್ಲ ಠಾಣಾ ಪೊಲೀಸರು ದಸ್ತಗಿರಿ ಮಾಡಿದ್ದಾರೆ.ಪುತ್ತೂರು ಚಿಕ್ಕಮುಡ್ನೂರು ನಿವಾಸಿ ಮೊಹಮ್ಮದ್ ಸಲಾಂ ಯಾನೆ ಕೆ.ಎಂ ಸಲಾಂ ಯಾನೆ ಡಾಲರ್ ಸಲಾಂ ಬಂಧಿತ ಆರೋಪಿ.ವಿಟ್ಲ ಪೊಲೀಸ್ ಠಾಣಾ ಅ.ಕ್ರ ನಂ: 24/2020 Se. 457.380 IPC ಮತ್ತು ಅ.ಕ್ರ ನಂ: 34/2022 ಕಲಂ. 457.380. IPC ಪ್ರಕರಣದಲ್ಲಿ ಆರೋಪಿಯಾಗಿರುವ ಈತ ಮಾನ್ಯ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ.ವಿಟ್ಲ ಠಾಣಾ ಪೊಲೀಸರು ಆರೋಪಿಯನ್ನು ಪುತ್ತೂರು ರೈಲ್ವೆ ನಿಲ್ದಾಣದ ಬಳಿ ದಸ್ತಗಿರಿ ಮಾಡಿದ್ದಾರೆ. ಬಳಿಕ ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿರುತ್ತದೆ.ಬಂಧಿತ ಆರೋಪಿತ ವಿರುದ್ಧ ಪುತ್ತೂರು ನಗರ ಠಾಣೆಯಲ್ಲಿ ಅ.ಕ್ರ: 45/2023, ಕಲಂ: 353, 332, 504 ಐ.ಪಿ.ಸಿ ಪ್ರಕರಣ ದಾಖಲಾಗಿದ್ದು, ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಹಿನ್ನೆಲೆಯಲ್ಲಿ ವಾರೆಂಟ್ ಜಾರಿಯಾಗಿರುತ್ತದೆ






