July 12, 2026
image (78)

ಕಾರ್ಕಳ: ಕಾರ್ಕಳದ ಮಿಯ್ಯಾರು ಜೋಡುಕಟ್ಟೆಯಲ್ಲಿ ಶುಕ್ರವಾರ ಬೆಳಿಗ್ಗೆ ಖಾಸಗಿ ಬಸ್ ಮತ್ತು ಆಟೋರಿಕ್ಷಾ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಆಟೋರಿಕ್ಷಾ ಚಾಲಕ ಗಾಯಗೊಂಡಿದ್ದಾರೆ.

ವರದಿಗಳ ಪ್ರಕಾರ, ಖಾಸಗಿ ಬಸ್ ಬಜಗೋಳಿಯಿಂದ ಕಾರ್ಕಳ ಕಡೆಗೆ ಹೋಗುತ್ತಿದ್ದಾಗ, ಅದೇ ರಸ್ತೆಯಲ್ಲಿ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಆಟೋರಿಕ್ಷಾಗೆ ಡಿಕ್ಕಿ ಹೊಡೆದಿದೆ.ಡಿಕ್ಕಿಯ ಪರಿಣಾಮ ಆಟೋರಿಕ್ಷಾ ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಬಸ್ಸಿನ ಮುಂಭಾಗಕ್ಕೆ ಹಾನಿಯಾಗಿದೆ. ಗಾಯಗೊಂಡ ಆಟೋರಿಕ್ಷಾ ಚಾಲಕ ಚಂದ್ರಕಾಂತ್ ಶೆಣೈ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಅಪಘಾತ ಸಂಭವಿಸಲು ಸ್ಥಳದಲ್ಲಿ ಅವೈಜ್ಞಾನಿಕ ರಸ್ತೆ ತಿರುವು ಕಾರಣವಾಗಿರಬಹುದು ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ ಘಟನೆಯ ಕುರಿತು ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.

About The Author

Leave a Reply