

ಮಂಗಳೂರಿನ ಜಿಲ್ಲಾ ಆಸ್ಪತ್ರೆ ವೆನ್ಲಾಕ್ನಲ್ಲಿ ತುರ್ತು ಚಿಕಿತ್ಸೆಗೆ ಅಗತ್ಯವಿರುವ ICU ಬೆಡ್ಗಳ ಕೊರತೆ ಎದುರಾಗಿದೆ ಎಂಬ ಆರೋಪ ಕೇಳಿಬಂದಿದೆ.
ಗಂಭೀರ ಸ್ಥಿತಿಯಲ್ಲಿರುವ ರೋಗಿಗಳಿಗೆ ತಕ್ಷಣವೇ ICU ಚಿಕಿತ್ಸೆ ಅಗತ್ಯವಿದ್ದರೂ, ಬೆಡ್ಗಳ ಲಭ್ಯತೆ ಇಲ್ಲದ ಕಾರಣ ರೋಗಿಗಳು ಹಾಗೂ ಅವರ ಕುಟುಂಬಸ್ಥರು ಪರದಾಡುವಂತಾಗಿದೆ ಎನ್ನಲಾಗಿದೆ.
ಒಂದೆಡೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಬರುವ ಬಡ ಮತ್ತು ಮಧ್ಯಮ ವರ್ಗದ ಜನರ ಸಂಖ್ಯೆ ಹೆಚ್ಚಾಗುತ್ತಿದ್ದರೆ, ಮತ್ತೊಂದೆಡೆ ICU ಬೆಡ್ಗಳ ಕೊರತೆ ಸಮಸ್ಯೆಯನ್ನು ಮತ್ತಷ್ಟು ಗಂಭೀರಗೊಳಿಸಿದೆ.

ತುರ್ತು ಪರಿಸ್ಥಿತಿಯಲ್ಲಿರುವ ರೋಗಿಗಳಿಗೆ ಸಮಯಕ್ಕೆ ಸರಿಯಾಗಿ ಚಿಕಿತ್ಸೆ ಸಿಗದಿದ್ದರೆ, ಪರಿಸ್ಥಿತಿ ಕೈಮೀರುವ ಸಾಧ್ಯತೆಯೂ ಇದೆ.
ದಕ್ಷಿಣ ಕನ್ನಡ ಸೇರಿದಂತೆ ಸುತ್ತಮುತ್ತಲಿನ ಹಲವು ಜಿಲ್ಲೆಗಳಿಂದ ರೋಗಿಗಳು ಚಿಕಿತ್ಸೆಗಾಗಿ ವೆನ್ಲಾಕ್ ಆಸ್ಪತ್ರೆಗೆ ಬರುತ್ತಿದ್ದಾರೆ. ಪರಿಣಾಮ ಆಸ್ಪತ್ರೆಯಲ್ಲಿ ರೋಗಿಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ICU ಬೆಡ್ಗಳ ಮೇಲೆ ಹೆಚ್ಚಿನ ಒತ್ತಡ ಉಂಟಾಗಿದೆ ಎನ್ನಲಾಗಿದೆ.
ಜಿಲ್ಲಾ ಆಸ್ಪತ್ರೆಯ ಮೇಲಿನ ಒತ್ತಡ ಕಡಿಮೆ ಮಾಡಲು ಸರ್ಕಾರ ಕೂಡಲೇ ಅಗತ್ಯ ICU ಬೆಡ್ಗಳು, ವೈದ್ಯಕೀಯ ಸಿಬ್ಬಂದಿ ಹಾಗೂ ಮೂಲಸೌಕರ್ಯ ಹೆಚ್ಚಿಸಬೇಕಿದೆ.
ಬೇರೆ ಬೇರೆ ಜಿಲ್ಲೆಗಳಿಂದಲೂ ಗಂಭೀರ ಸ್ಥಿತಿಯಲ್ಲಿರುವ ರೋಗಿಗಳು ವೆನ್ಲಾಕ್ಗೆ ಬರುತ್ತಿರುವುದಾದರೆ, ಆ ಜಿಲ್ಲೆಗಳ ಸರ್ಕಾರಿ ಆಸ್ಪತ್ರೆಗಳಲ್ಲಿ ಅಗತ್ಯ ICU ಹಾಗೂ ತುರ್ತು ಚಿಕಿತ್ಸಾ ವ್ಯವಸ್ಥೆ ಇಲ್ಲವೇ? ಎಂಬ ಪ್ರಶ್ನೆ ಇದೀಗ ಸಾರ್ವಜನಿಕರಲ್ಲಿ ಮೂಡಿದೆ. ಗಂಭೀರ ಕಾಯಿಲೆಗಳಿಗೆ ಮಾತ್ರವಲ್ಲದೆ, ಸಣ್ಣಪುಟ್ಟ ಜ್ವರ, ಹೊಟ್ಟೆನೋವು ಸೇರಿದಂತೆ ಸಾಮಾನ್ಯ ಆರೋಗ್ಯ ಸಮಸ್ಯೆಗಳಿಗೂ ಹೊರಜಿಲ್ಲೆಗಳಿಂದ ರೋಗಿಗಳು ವೆನ್ಲಾಕ್ಗೆ ಬರುತ್ತಿದ್ದಾರೆ.
ಪ್ರತಿ ಜಿಲ್ಲೆಯಲ್ಲೂ ಸಮರ್ಪಕ ICU ವ್ಯವಸ್ಥೆ ಮತ್ತು ಅಗತ್ಯ ವೈದ್ಯಕೀಯ ಸೌಲಭ್ಯಗಳನ್ನು ಕಲ್ಪಿಸಿದರೆ, ಎಲ್ಲಾ ರೋಗಿಗಳು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯನ್ನೇ ಅವಲಂಬಿಸುವ ಪರಿಸ್ಥಿತಿ ಕಡಿಮೆಯಾಗಬಹುದು.
ಸಚಿವರೇ ಜಿಲ್ಲಾ ಆಸ್ಪತ್ರೆಗಳಲ್ಲಿ ಸೂಕ್ತ ವ್ಯವಸ್ಥೆ ಕಲ್ಪಿಸಬೇಕಿದೆ
ವೆನ್ಲಾಕ್ ಆಸ್ಪತ್ರೆಯಲ್ಲಿ ಹೆಚ್ಚುತ್ತಿರುವ ರೋಗಿಗಳ ಸಂಖ್ಯೆ ಹಾಗೂ ICU ಬೆಡ್ಗಳ ಕೊರತೆಯ ಸಮಸ್ಯೆಯನ್ನು ಆರೋಗ್ಯ ಸಚಿವರಾದ ಯು.ಟಿ. ಖಾದರ್ ಅವರು ಗಂಭೀರವಾಗಿ ಪರಿಗಣಿಸಬೇಕಿದೆ.
ಮಂಗಳೂರು ಮಾತ್ರವಲ್ಲದೆ ಹೊರ ಜಿಲ್ಲೆಗಳಿಂದಲೂ ಸಣ್ಣಪುಟ್ಟ ಆರೋಗ್ಯ ಸಮಸ್ಯೆಗಳಿಗೆ ರೋಗಿಗಳು ವೆನ್ಲಾಕ್ ಆಸ್ಪತ್ರೆಗೆ ಬರುತ್ತಿರುವುದರಿಂದ, ಆಸ್ಪತ್ರೆಯ ಮೇಲೆ ಹೆಚ್ಚುವರಿ ಒತ್ತಡ ಉಂಟಾಗುತ್ತಿದೆ.
ಹೀಗಾಗಿ ಪ್ರತಿಯೊಂದು ಜಿಲ್ಲಾ ಆಸ್ಪತ್ರೆಯಲ್ಲೂ ICU, ತುರ್ತು ಚಿಕಿತ್ಸೆ ಸೇರಿದಂತೆ ಅಗತ್ಯ ವೈದ್ಯಕೀಯ ಸೌಲಭ್ಯಗಳನ್ನು ಸಮರ್ಪಕವಾಗಿ ಕಲ್ಪಿಸುವುದು ಅಗತ್ಯ.
ಎಲ್ಲಾ ಜಿಲ್ಲೆಗಳಲ್ಲೂ ಉತ್ತಮ ಚಿಕಿತ್ಸೆ ದೊರೆತರೆ, ಸಣ್ಣಪುಟ್ಟ ಕಾಯಿಲೆಗಳಿಗೂ ರೋಗಿಗಳು ಮಂಗಳೂರಿನ ವೆನ್ಲಾಕ್ನ್ನೇ ಅವಲಂಬಿಸುವ ಪರಿಸ್ಥಿತಿ ಕಡಿಮೆಯಾಗಬಹುದು.
ಆರೋಗ್ಯ ಸಚಿವರು ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ, ಎಲ್ಲಾ ಜಿಲ್ಲಾ ಆಸ್ಪತ್ರೆಗಳಲ್ಲಿ ಅಗತ್ಯ ವೈದ್ಯಕೀಯ ವ್ಯವಸ್ಥೆ ಕಲ್ಪಿಸಲು ಕ್ರಮ ಕೈಗೊಳ್ಳಬೇಕು ಎಂಬುದು ಸಾರ್ವಜನಿಕರ ಆಗ್ರಹ.






