August 23, 2026
WhatsApp Image 2026-08-22 at 10.42.54 AM

ಬಿಎ ಓದುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಇದ್ದಕ್ಕಿದ್ದಂತೆ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ.ಮಗಳ ಸಾವಿನ ಬಗ್ಗೆ ಪೋಷಕರು ಅನುಮಾನ ವ್ಯಕ್ತಪಡಿಸಿದ್ದಾರೆ.

ಇಲ್ಲಿನ ಚನ್ನರಾಯಪಟ್ಟಣದ ಅಂಬಿಕ ನಗರದಲ್ಲಿ ಯುವತಿಯೊಬ್ಬಳ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಈ ಸಾವಿನ ಸುತ್ತ ಸಾಕಷ್ಟು ಅನುಮಾನಗಳು ವ್ಯಕ್ತವಾಗುತ್ತಿದೆ.

ನಗರದ ಸಾಕಮ್ಮ-ಮಂಜಶೆಟ್ಟಿ ದಂಪತಿ ಪುತ್ರಿ ರಚಿತಾ (19) ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಯುವತಿ. ಮೊದಲ ವರ್ಷದ ಬಿಎ ವ್ಯಾಸಂಗ ಮಾಡುತ್ತಿದ್ದಳು. ಆ.21 ರ ರಾತ್ರಿ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದ್ದು, ಪೋಷಕರು ಮಗಳ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ.

ಯುವತಿ ಸುಮಾರು ಒಂದು ವರೆ ವರ್ಷದಿಂದ ನವೀನ್‌ ಎಂಬಾತನನ್ನು ಪ್ರೀತಿಸುತ್ತಿದ್ದಳು. ನವೀನ್‌ ಪಟ್ಟಣದ ರೇಣುಕಾಂಬ ರಸ್ತೆಯಲ್ಲಿರುವ ಬೇಕರಿಯೊಂದರಲ್ಲಿ ಕೆಲಸ ಮಾಡುತ್ತಿದ್ದ. ಇದೇ ಬೇಕರಿಯಲ್ಲಿ ರಚಿತಾ ತಾಯಿ ಸಾಕಮ್ಮ ಕೆಲಸ ಮಾಡುತ್ತಿದ್ದರು. ಇಬ್ಬರು ಪ್ರೀತಿಸುವ ವಿಷಯವನ್ನು ಸಾಕಮ್ಮ ಬಳಿ ರಚಿತಾ ಹಾಗೂ ನವೀನ್ ಹೇಳಿದ್ದರು. ಮದುವೆ ಮಾಡಿಸುವುದಾಗಿ ರಚಿತಾ ತಾಯಿ ಭರವಸೆಕೊಟ್ಟಿದ್ದರು. ಆದರೆ ಇತ್ತೀಚಿಗೆ ರಚಿತಾಳಿಗೆ ನವೀನ್ ಕಿರುಕುಳ ನೀಡುತ್ತಿದ್ದ ಎಂದು ಸಾಕಮ್ಮ ಆರೋಪಿಸಿದ್ದಾರೆ. ಈಗ ಮಗಳು ಏಕಾಏಕಿ ಶವವಾಗಿ ಪತ್ತೆಯಾಗಿದ್ದಾಳೆ.

About The Author

Leave a Reply