Visitors have accessed this post 197 times.

ಬಳ್ಳಾರಿಯಲ್ಲಿ ವಿಷಕಾರಿ ಬೀಜ ಸೇವಿಸಿ 8 ಮಂದಿ ಶಾಲಾ ಮಕ್ಕಳು ಅಸ್ವಸ್ಥ, ಆಸ್ಪತ್ರೆಗೆ ದಾಖಲು

Visitors have accessed this post 197 times.

ಳ್ಳಾರಿ : ವಿಷಕಾರಿ ಬೀಜ ಸೇವಿಸಿ 8 ಶಾಲಾ ಮಕ್ಕಳು ಅಸ್ವಸ್ಥಗೊಂಡ ಘಟನೆ ಸಿರಗುಪ್ಪ ತಾಲೂಕಿನ ತೆಕ್ಕಲಕೋಟೆ ಗ್ರಾಮದಲ್ಲಿ ನಡೆದಿದೆ.

ಶಾಲೆಯಲ್ಲಿ ಮಧ್ಯಾಹ್ನದ ಊಟದ ವಿರಾಮದಲ್ಲಿ ಹೊರಗೆ ಹೋದ ಮಕ್ಕಳು ಗೊತ್ತಿಲ್ಲದೇ ವಿಷಕಾರಿ ಬೀಜ ಸೇವಿಸಿ ಅಸ್ವಸ್ಥಗೊಂಡಿದ್ದಾರೆ. ವಾಂತಿ ಭೇದಿ ಕಾಣಿಸಿಕೊಂಡ ಕೂಡಲೇ 8 ಮಂದಿ ವಿದ್ಯಾರ್ಥಿಗಳನ್ನು ಸಿರಗುಪ್ಪ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ವಾಲ್ಮೀಕಿ ನಗರದ ಸರ್ಕಾರಿ ಶಾಲೆಯಲ್ಲಿ ಈ ಘಟನೆ ನಡೆದಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಮಕ್ಕಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. 8 ಮಂದಿ ಮಕ್ಕಳ ಪೈಕಿ ಓರ್ವ ವಿದ್ಯಾರ್ಥಿ ಸ್ವಲ್ಪ ಚಿಂತಾಜನಕವಾಗಿದೆ ಎಂದು ಹೇಳಲಾಗಿದೆ

Leave a Reply

Your email address will not be published. Required fields are marked *