Visitors have accessed this post 445 times.

ಮಂಗಳೂರು ವಿಮಾನ ನಿಲ್ದಾಣಕ್ಕೆ ಹುಸಿ ಬಾಂಬ್ ಬೆದರಿಕೆ ಪ್ರಕರಣ : ಆರೋಪಿಗೆ ಜೈಲು ಶಿಕ್ಷೆ…!!

Visitors have accessed this post 445 times.

ಮಂಗಳೂರು: ನಗರದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟಿದೆ ಎಂದು ಹುಸಿ ಬೆದರಿಕೆ ಹಾಕಿದ್ದ ಆರೋಪ ಸಾಬೀತಾಗಿದ್ದು ಅಪರಾಧಿಗೆ ನ್ಯಾಯಾಲಯ 1 ತಿಂಗಳ ಶಿಕ್ಷೆ ವಿಧಿಸಿದೆ.
ಮಂಗಳೂರಿನ 6ನೇ ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶರಾದ ಪೂಜಶ್ರೀ ಅವರು ಅಪರಾಧಿಗೆ 1 ತಿಂಗಳ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ.
ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಮುದ್ರಾಡಿಯ ವಸಂತ ಕೃಷ್ಣ ಶೇರಿಗಾರ ಶಿಕ್ಷೆಗೊಳಗಾದವನು. ಈತ ವಿಮಾನ ನಿಲ್ದಾಣದ ನಿರ್ದೇಶಕರಿಗೆ ಬೆದರಿಕೆ ಕರೆ ಮಾಡಿದ್ದ.
ಈ ಬಗ್ಗೆ ಬಜಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸರಕಾರಿ ಅಭಿಯೋಜಕ ಮೋಹನ್‌ ಕುಮಾರ್ ಬಿ. ಹಾಗೂ ಸಹಾಯಕ ಸರಕಾರಿ ಅಭಿಯೋಜಕ ಜನಾರ್ದನ್ ಸರಕಾರದ ಪರ ವಾದ ಮಂಡಿಸಿದರು.

Leave a Reply

Your email address will not be published. Required fields are marked *