ಮಂಗಳೂರು: ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ನೇತೃತ್ವದ ನರಿಂಗಾನ ಕಂಬಳ ಸಮಿತಿ ಆಶ್ರಯದಲ್ಲಿ ನರಿಂಗಾನ ಗ್ರಾಮ ಪಂಚಾಯತ್ ಸಹಕಾರದಲ್ಲಿ ನರಿಂಗಾನದ ಮೋರ್ಲ-ಬೋಳದಲ್ಲಿ ತೃತೀಯ ವರ್ಷದ ಹೊನಲು ಬೆಳಕಿನ “ಲವ-ಕುಶ’ ಜೋಡುಕರೆ ನರಿಂಗಾನ ಕಂಬಳ್ಳೋತ್ಸವ ಜ.11ರಂದು ನಡೆಯಲಿದೆ. ಸಂಜೆ 4.30ಕ್ಕೆ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಲಿದ್ದಾರೆ.