ಮಂಗಳೂರು: ಜಪ್ಪಿನಮೊಗರು ಬಳಿ ಕಾರು ಅಪಘಾತಕ್ಕೆ ಬಿಗ್ ಟ್ವಿಸ್ಟ್..!!

ಮಂಗಳೂರು: ಜಪ್ಪಿನಮೊಗರು ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರು ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವನಪ್ಪಿದ್ದು, ಇದಕ್ಕೆ ಚಾಲಕ ಮದ್ಯಪಾನ ಸೇವಿಸಿದ್ದೆ ಕಾರಣ ಎಂದು ಪೊಲೀಸರು ಪತ್ತೆ ಮಾಡಿದ್ದಾರೆ.

ಜೂನ್ 18 ರಂದು ಜಪ್ಪಿನಮೊಗರು ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರು ಡಿವೈಡರ್ ಗೆ ಡಿಕ್ಕಿ ಹೊಡೆದು ಸಂಭವಿಸಿದ ರಸ್ತೆ ಅಪಘಾತದಲ್ಲಿ ಇಬ್ಬರು ಯುವಕರು ಮೃತಪಟ್ಟಿದ್ದರು. ಈ ಘಟನೆಗೆ ಕಾರು ಚಾಲಕನಾಗಿದ್ದ ಅಮನ್ ರಾವ್ ಮದ್ಯಪಾನ ಮಾಡಿ ಅತಿ ವೇಗದಲ್ಲಿ ಕಾರು ಚಲಾಯಿಸಿದ್ದೇ ಕಾರಣ ಎಂದು ಪೊಲೀಸರು ಪತ್ತೆ ಮಾಡಿದ್ದಾರೆ. ಅಪಘಾತದಲ್ಲಿ ಕಾರು ಚಾಲಕ ಅಮನ್ ರಾವ್ ಮತ್ತು ಎನ್ ಎಸ್ ಯುಐ ಜಿಲ್ಲಾ ಉಪಾಧ್ಯಕ್ಷ ಓಂಶ್ರೀ ಪೂಜಾರಿ ಮೃತಪಟ್ಟಿದ್ದು ಸಹ ಪ್ರಯಾಣಿಕರಾಗಿದ್ದ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದರು. ಈ ಬಗ್ಗೆ ಸಂಚಾರ ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಕಾರಿನ ಚಾಲಕ ಮದ್ಯ ಸೇವಿಸಿ ಅತಿ ವೇಗದಲ್ಲಿ ವಾಹನ ಚಾಲನೆ ಮಾಡಿರುವುದು ಘಟನೆಗೆ ಕಾರಣವೆಂದು ತನಿಖೆಯಲ್ಲಿ ಕಂಡುಬಂದಿದೆ. ಈ ಸಂಬಂಧ ಮೋಟಾರು ವಾಹನ ಕಾಯಿದೆ ಅನ್ವಯ ಕೇಸು ದಾಖಲಿಸಲಾಗಿದೆ.

Leave a Reply