Visitors have accessed this post 448 times.
ಕುಂದಾಪುರ : ಡೀಸೆಲ್ ಹಾಕಲು ಬಂದ ಜೀಪೊಂದು ಪೆಟ್ರೋಲ್ ಬಂಕಿನಲ್ಲಿ ಬೈಕಿಗೆ ತಾಗಿದೆ ಎನ್ನುವ ಕಾರಣಕ್ಕೆ ಮಾತಿಗೆ ಮಾತು ಬೆಳೆದು, ಬಳಿಕ ಮನೆ ಸಮೀಪ ಬಂದು ಗ್ರಾಮ ಪಂಚಾಯತ್ ಸದಸ್ಯನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಕೊಲ್ಲೂರು ಪೊಲೀಸ್ ಠಾಣಾ ವ್ಯಾಪ್ತಿಯ ಜಡ್ಕಲ್ ಗ್ರಾಮ ಪಂಚಾಯತ್ ನ ಬೀಸಿನ ಪಾರೆ ಎಂಬಲ್ಲಿ ಭಾನುವಾರ ಸಂಜೆ ನಡೆದಿದೆ ಜಡ್ಕಲ್ ಗ್ರಾಮ ಪಂಚಾಯತ್ ನ ಬೀಸಿನಪಾರೆ ವಾರ್ಡಿನ ಚಂದ್ರಮೋಹನ ನಾಯ್ಕ್ ಎಂಬುವರೇ ಗಂಭಿರ ಗಾಯಗೊಂಡು ಆಸ್ಪತ್ರೆ ಸೇರಿದವರು.ಚಂದ್ರಮೋಹನ್ ನಾಯ್ಕ್ ಭಾನುವಾರ ಸಂಜೆ ಇಡೂರು ಕುಂಜ್ಞಾಡಿಯಲ್ಲಿರುವ ಪೆಟ್ರೋಲ್ ಬಂಕೊಂದಕ್ಕೆ ಡೀಸೆಲ್ ಹಾಕಿಸಿಕೊಳ್ಳಲು ತಮ್ಮ ಜೀಪಿನಲ್ಲಿ ಹೋಗಿದ್ದರು. ಈ ವೇಳೆ ಬಂಕ್ನಲ್ಲಿ ನಿಲ್ಲಿಸಿದ್ದ ಬೈಕೊಂದಕ್ಕೆ ಚಂದ್ರಮೋಹನ್ ಅವರ ಜೀಪ್ ತಾಗಿದೆಯೆನ್ನಲಾಗಿದೆ. ಆಗ ಚಂದ್ರಮೋಹನ ಬೈಕ್ ಚಾಲಕನಲ್ಲಿ ಕ್ಷಮೆ ಕೇಳಿದ್ದಾರೆ.ಆದರೆ ಅದನ್ನೇ ಗಂಭಿರವಾಗಿ ತೆಗೆದುಕೊಂಡಿದ್ದ ಬೈಕ್ ಚಾಲಕ ಅವಾಚ್ಯವಾಗಿ ಬೈದು ಗಲಾಟೆ ನಡೆಸಿದ್ದು, ಜೀಪ್ ಚಾಲಕ ಚಂದ್ರಮೋಹನ್ ಡೀಸೆಲ್ ತುಂಬಿಸಿಕೊಂಡು ಬೀಸಿನಪಾರೆಯಲ್ಲಿರುವ ತಮ್ಮ ಮನೆಗೆ ಬಂದಿದ್ದರು. ಬಳಿಕ ಮನೆಯಲ್ಲಿ ಜೀಪ್ ನಿಲ್ಲಿಸಿ ಸಮೀಪದಲ್ಲಿದ್ದ ಅಂಗಡಿಗೆ ಬಂದಿದ್ದ ಸಂದರ್ಭ ಸುಮಾರು 35 ಜನರ ತಂಡವೊಂದು ಬಂದು ಗಂಭೀರ ಹಲ್ಲೆ ನಡೆಸಿ, ಕೊಲೆ ಬೆದರಿಕೆ ಹಾಕಿದ್ದು, ಜಾತಿನಿಂದನೆ ಮಾಡಿ ಪರಾರಿಯಾಗಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.ಗಂಭೀರ ಗಾಯಗೊಂಡ ಚಂದ್ರಮೋಹನ್ ನಾಯ್ಕ್ 108 ವಾಹನದಲ್ಲಿ ಬಂದು ರಾತ್ರಿ ಕುಂದಾಪುರ ಸರ್ಕಾರೀ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದಾರೆ.Related Posts
ವಿಟ್ಲ: ಯುವಕನಿಂದ ಇಬ್ಬರು ಅಪ್ರಾಪ್ತೆಯರಿಗೆ ಲೈಂಗಿಕ ದೌರ್ಜನ್ಯ – ಒಬ್ಬಾಕೆ ಗರ್ಭಿಣಿಯಾಗುತ್ತಿದ್ದಂತೆ ಆರೋಪಿ ಅರೆಸ್ಟ್
Visitors have accessed this post 500 times.
ಬಂಟ್ವಾಳ: ಇನ್ಸ್ಟಾಗ್ರಾಂನಲ್ಲಿ ನಕಲಿ ಐಡಿ ಸೃಷ್ಟಿಸಿ ಅಪ್ರಾಪ್ತ ಬಾಲಕಿಯರಿಬ್ಬರೊಂದಿಗೆ ಮೋಸದಾಟ ನಡೆಸಿ ನಿರಂತರ ಲೈಂಗಿಕ ದೌರ್ಜನ್ಯ ಎಸಗಿ ಒಬ್ಬಾಕೆಯನ್ನು ಗರ್ಭಿಣಿಯನ್ನಾಗಿ ಮಾಡಿದ ಕಾಸರಗೋಡು ಮೂಲದ ಕಾಮುಕ ಯುವಕನನ್ನು…
ಮಂಗಳೂರು : ಕದ್ರಿ ಪಾರ್ಕ್ ಗೆ ಬಂದಿದ್ದ ಕಾಲೇಜು ವಿದ್ಯಾರ್ಥಿಗಳ ಮೇಲೆ ನೈತಿಕ ಪೊಲೀಸ್ ಗಿರಿ..!
Visitors have accessed this post 997 times.
ಮಂಗಳೂರು : ಕದ್ರಿ ಪಾರ್ಕ್ ಗೆ ಬಂದಿದ್ದ ಕಾಲೇಜು ವಿದ್ಯಾರ್ಥಿಗಳ ಮೇಲೆ ಇಂದು ಬೆಳಗ್ಗೆ ನೈತಿಕ ಪೊಲೀಸ್ ಗಿರಿ ನಡೆದಿದ್ದು, ಕದ್ರಿ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ ನಡೆಸಿ…
ಉಡುಪಿ ಹೈವೇಯಲ್ಲಿ ತಲ್ವಾರ್ ಹಿಡಿದು ಅಟ್ಟಹಾಸ – ಗರುಡ ಗ್ಯಾಂಗ್ನ 6 ಪುಡಿ ರೌಡಿಗಳು ಅರೆಸ್ಟ್
Visitors have accessed this post 2323 times.
ಉಡುಪಿ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ 169ಎನಲ್ಲಿ ಶಾರದಾ ಮಂಟಪ ಜಂಕ್ಷನ್ ಬಳಿ ಲಾಂಗ್ ಹಿಡಿದು ಅಟ್ಟಹಾಸ ಮೆರೆದಿದ್ದ ಗರುಡ ಗ್ಯಾಂಗ್ನ 6 ಪುಡಿ ರೌಡಿಗಳನ್ನು ಪೊಲೀಸರು ಬಂಧಿಸಿದ್ದಾರೆ.…