Visitors have accessed this post 637 times.
ಮಂಗಳೂರು : ಜ್ಞಾನವಾಪಿ ಮಸೀದಿಯ ನೆಲಮಾಳಿಗೆಯಲ್ಲಿ ಪೂಜೆಗೆ ಅನುಮತಿ ನೀಡಿರುವುದನ್ನು ಖಂಡಿಸಿ ಮಂಗಳೂರಿನಲ್ಲಿ SDPI ಪಕ್ಷದ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ನಗರದ ಕ್ಲಾಕ್ ಟವರ್ ಬಳಿ ಪ್ರತಿಭಟನಾ ಸಭೆ ನಡೆಸಿದ ಪ್ರತಿಭಟನಕಾರರು ಪೂಜಾ ಸ್ಥಳಗಳ ಕಾಯಿದೆಯನ್ನು ಜಾರಿಗೊಳಿಸುವಂತೆ ಒತ್ತಾಯಿಸಿದರು.
ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ SDPI ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಮೈಸೂರು ಜ್ಞಾನವಾಪಿ ವಿಷಯದಲ್ಲಿ ಹೈಕೋರ್ಟ್ ನಲ್ಲಿ ಕೇಸು ನಡೀತಾ ಇತ್ತು ಆದ್ರೂ ತರಾತುರಿಯಲ್ಲಿ ಕೆಳಗಿನ ಕೋರ್ಟ್ ನ ಜಡ್ಜ್ ಪೂಜೆಗೆ ಅವಕಾಶ ಕೊಟ್ಟರು. ಪೂಜಾ ಸ್ಥಳ ಕಾಯಿದೆಯಡಿ ಯಥಾಸ್ಥಿತಿ ಆದೇಶ ಇದೆ ಆದ್ರೆ ಆ ಕಾನೂನಿಗೆ ಮೂರು ಕಾಸಿನ ಬೆಲೆ ಕೊಡ್ತಾ ಇಲ್ಲ. ಸಂಘರ್ಷ, ತ್ಯಾಗ, ಬಲಿದಾನ ಮಾಡದೇ ನಮ್ಮ ಸಮಸ್ಯೆಗೆ ಪರಿಹಾರ ಇಲ್ಲ, ಈ ದೇಶದಲ್ಲಿ ಕಾನೂನು ಇದ್ಯಾ? ಕಾನೂನು ಸತ್ತು ಹೋಗಿದೆ. ಯಾವ ಬೆಲೆ ತೆತ್ತಾದರೂ ಮಸೀದಿ, ಮಂದಿರ, ಚರ್ಚ್ ಗಳನ್ನು ಉಳಿಸಿಕೊಳ್ಳಬೇಕು. ಪ್ರಜಾತಂತ್ರ ವ್ಯವಸ್ಥೆಯಲ್ಲಿ ಇದ್ದಿದ್ದನ್ನ ಅಲ್ಲೇ ಉಳಿಸಿಕೊಳ್ಳಬೇಕು ಎಂದ ಅವರು ಸಿದ್ದರಾಮಯ್ಯ, ರಾಹುಲ್, ಸೋನಿಯಾ, ಖರ್ಗೆ ಉಳಿಸ್ತಾರೆ ಅಂತ ಕಾಯಬೇಡಿ. ಹೋರಾಟಕ್ಕೆ ತಯಾರಾಗಿ ಜ್ಞಾನವಾಪಿ ನಮ್ಮದು ನಮ್ಮದಾಗೆ ಉಳಿಯುವುದು. ಸಂಘರ್ಷಕ್ಕೆ ಮತ್ತು ಹುತಾತ್ಮರಾಗಲು ತಯಾರಾಗಿ ಎಂದು ಸಂಘರ್ಷಕ್ಕೆ ಬಹಿರಂಗ ಕರೆ ನೀಡಿದ್ದಾರೆ.