Visitors have accessed this post 705 times.
ಕರ್ನಾಟಕದ ಮೂರು ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆಗಾಗಿ ಕಾಂಗ್ರೆಸ್ ಪಕ್ಷದಿಂದ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿದೆ. ಜಿಸಿ ಚಂದ್ರಶೇಖರ್ ಸೇರಿದಂತೆ ಮೂವರಿಗೆ ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ನೀಡಲಾಗಿದೆ.
ಎಐಸಿಸಿ ಜನರಲ್ ಸೆಕ್ರೇಟರಿ ಕೆ.ಸಿ ವೇಣುಗೋಪಾಲ್ ಅವರು ಪಟ್ಟಿಯನ್ನು ಪ್ರಕಟಿಸಿದ್ದು, ಎಐಸಿಸಿ ಅಧ್ಯಕ್ಷರಾದಂತ ಮಲ್ಲಿಕಾರ್ಜುನ ಖರ್ಗೆ ಅವರ ಸೂಚನೆಯ ಮೇರೆಗೆ ಮುಂಬರುವಂತ ರಾಜ್ಯಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳನ್ನು ಘೋಷಣೆ ಮಾಡಿರುವುದಾಗಿ ತಿಳಿಸಿದ್ದಾರೆ.
ಹೀಗಿದೆ ಕರ್ನಾಟಕದ ಕೈ ಅಭ್ಯರ್ಥಿಗಳ ರಾಜ್ಯಸಭಾ ಚುನಾವಣೆಯ ಪಟ್ಟಿ
- ಅಜಯ್ ಮಕೇನ್
- ಡಾ.ಸೈಯದ್ ನಾಸೀರ್
- ಜಿ.ಸಿ ಚಂದ್ರಶೇಖರ್
ಇನ್ನೂ ಮದ್ಯಪ್ರದೇಶದಿಂದ ಅಶೋಕ್ ಸಿಂಗ್, ತೆಲಂಗಾಣದಿಂದ ರೇಣುಕ ಚೌದರಿ ಹಾಗೂ ಎಂ ಅನಿಲ್ ಕುಮಾರ್ ಯಾದವ್ ಅವರಿಗೆ ಟಿಕೆಟ್ ಘೋಷಣೆ ಮಾಡಲಾಗಿದೆ.