Visitors have accessed this post 936 times.
ವೇಶ್ಯಾವಾಟಿಕೆ ನಡೆಸುತ್ತಿದ್ದ ಆರೋಪದ ಮೇಲೆ ಪಶ್ಚಿಮ ಬಂಗಾಳ ಪೊಲೀಸರು ಬಿಜೆಪಿ ನಾಯಕ ಸಬ್ಯಸಾಚಿ ಘೋಷ್ನನ್ನು ವಶಕ್ಕೆ ಪಡೆದಿದ್ದಾರೆ. ಸಂದೇಶ್ಖಾಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಹಾಗೂ ಟಿಎಂಸಿ ನಡುವಿನ ಜಟಾಪಟಿ ನಡುವೆಯೇ ಈ ಬೆಳವಣಿಗೆ ನಡೆದಿರುವುದು ವಿಪಕ್ಷಕ್ಕೆ ಭಾರೀ ಮುಜುಗರವನ್ನುಂಟು ಮಾಡಿದೆ.
ಹೌರಾದ ಲಾಡ್ಜ್ ಒಂದರಲ್ಲಿ ಸಬ್ಯಸಾಚಿ ಘೋಷ್ ವೇಶ್ಯಾವಾಟಿಕೆ ನಡೆಸುತ್6ತಿದ್ದರು ಎಂಬ ಆರೋಪ ಕೇಳಿ ಬಂದಿದ್ದು, ಬಿಜೆಪಿ ಪಿಂಪ್ಗಳನ್ನು ರಕ್ಷಿಸುತ್ತಿದೆ ಎಂದು ಟಿಎಂಸಿ ಆರೋಪಿಸಿ ಕಿಡಿಕಾರಿದೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಬರೆದುಕೊಂಡಿರುವ ಟಿಎಂಸಿ, ಬಿಜೆಪಿ ನಾಯಕ ಸಬ್ಯಸಾಚಿ ಹೌರಾದ ಸಂಕ್ರೈಲ್ನಲ್ಲಿರುವ ತಮ್ಮ ಹೋಟೆಲ್ನಲ್ಲಿ ಅಪ್ರಾಪ್ತ ವಯಸ್ಕರನ್ನು ಇಟ್ಟುಕೊಂಡು ವೇಶ್ಯಾವಾಟಿಕೆ ನಡೆಸುತ್ತಿರುವುದು ಪೊಲೀಸ್ ದಾಳಿಯಿಂದ ಬೆಳೆಕಿಗೆ ಬಂದಿದೆ. ಆರು ಮಂದಿ ಸಂತ್ರಸ್ತರನ್ನು ರಕ್ಷಿಸಲಾಗಿದ್ದು, 11 ಮಂದಿಯನ್ನು ವಶಕ್ಕೆ ಪಡೆಯಲಾಗಿದೆ. ಇದನ್ನು ಗಮನಿಸಿದರೆ ಬಿಜೆಪಿ ಬೇಟಿಗಳ ಬದಲಾಗಿ ಪಿಂಪ್ಗಳ ರಕ್ಷಣೆಗೆ ನಿಂತಿರುವುದು ಸ್ಪಷ್ಟವಾಗಿ ಗೋಚರಿಸುತ್ತಿದೆ ಎಂದು ಕಿಡಿಕಾರಿದೆ.
ಸಂದೇಶ್ಖಾಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಆಡಳಿತರೂಢ ಟಿಎಂಸಿ ವಿರುದ್ಧ ಬಿಜೆಪಿ ಪ್ರತಿಭಟನೆ ನಡೆಸುತ್ತಿರುವ ಬೆನ್ನಲ್ಲೇ ಈ ಬೆಳವಣಿಗೆ ನಡೆದಿರುವುದು ವಿಪಕ್ಷಕ್ಕೆ ಭಾರೀ ಹಿನ್ನಡೆಯಾಗಿದೆ. ಈ ನಿಟ್ಟಿನಲ್ಲಿ ಬಿಜೆಪಿ ಆರೋಪವನ್ನು ಹೇಗೆ ನಿಭಾಯಿಸಲಿದೆ ಎಂದು ಕಾದು ನೋಡಬೇಕಿದೆ.