Visitors have accessed this post 539 times.
ಉಪ್ಪಿನಂಗಡಿ: ಚುನಾವಣೆ ನೀತಿ ಸಂಹಿತೆ ಜಾರಿಯಾಗುವ ಮೊದಲೇ ಮುದ್ರಿತವಾದ ಮದುವೆ ಆಮಂತ್ರಣ ಪತ್ರಿಕೆಯಲ್ಲಿ “ಈ ಬಾರಿಯೂ ಮೋದಿ ಅವರನ್ನು ಪ್ರಧಾನಿ ಮಾಡುವುದೇ ವಧು-ವರರಿಗೆ ನೀಡುವ ಉಡುಗೊರೆ” ಎಂದು ಮುದ್ರಿಸಿದ ವರನ ವಿರುದ್ಧ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಪೊಲೀಸರು ಕೇಸು ದಾಖಲಿಸಿದ್ದಾರೆ. ಶಿವಪ್ರಸಾದ್ ಎಂಬುವವರ ಮದುವೆ ಏಪ್ರಿಲ್ 18ರಂದು ನೆರವೇರಿದೆ. ಮಾರ್ಚ್ 1ರಂದು ಮದುವೆಯ ಆಮಂತ್ರಣ ಪತ್ರ ಮುದ್ರಿಸಲಾಗಿದ್ದು, ಈ ಬಗ್ಗೆ ಮಾಹಿತಿ ಪಡೆದುಕೊಂಡ ಚುನಾವಣಾ ನೀತಿ ಸಂಹಿತೆ ಜಾರಿ ನಿಗಾ ತಂಡದ ಅಧಿಕಾರಿಗಳು ಏಪ್ರಿಲ್ 14ರಂದು ವರನ ಮನೆಗೆ ಭೇಟಿ ನೀಡಿ ವಿಚಾರಿಸಿದ್ದಾರೆ. ಇದು ನೀತಿ ಸಂಹಿತೆ ಉಲ್ಲಂಘನೆ ಅಲ್ಲ, ಮೋದಿಯವರ ಮೇಲಿನ ಪ್ರೀತಿ ಮತ್ತು ದೇಶದ ಮೇಲಿನ ಕಾಳಜಿಯಿಂದ ಈ ರೀತಿ ಮುದ್ರಿಸಿರುವುದಾಗಿ ಶಿವಪ್ರಸಾದ್ ಲಿಖಿತ ಹೇಳಿಕೆ ನೀಡಿದ್ದಾರೆ. ಮತದಾನದ ನಂತರ ಅಧಿಕಾರಿಗಳು ಈ ಬಗ್ಗೆ ದೂರು ದಾಖಲಿಸಿದ್ದು, ಶನಿವಾರ ಆಮಂತ್ರಣ ಪತ್ರಿಕೆ ಮುದ್ರಣ ಮಾಡಿದವರನ್ನು ಕೂಡ ಕರೆಸಿ ವಿಚಾರಿಸಲಾಗಿದೆ.Related Posts
ಮಂಗಳೂರು:“ಕಾಂಗ್ರೆಸ್ ನಲ್ಲಿ ಆಚಾರ ವಿಚಾರವಿದೆ ಪ್ರಚಾರವಿಲ್ಲ, ಪ್ರಚಾರ ಮೋದಿಯಿಂದ ಕಲೀಬೇಕು”-ಪ್ರಿಯಾಂಕ್ ಖರ್ಗೆ ಲೇವಡಿ
Visitors have accessed this post 262 times.
ಮಂಗಳೂರು: ಕಾಂಗ್ರೆಸ್ ನಲ್ಲಿ ಆಚಾರವಿದೆ ವಿಚಾರವಿದೆ. ಆದರೆ, ಪ್ರಚಾರವಿಲ್ಲ. ಆ ಪ್ರಚಾರವನ್ನು ನಾವು ಮೋದಿಯವರಿಂದ ಕಲಿಯಬೇಕು ಎಂದು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಲೇವಡಿ ಮಾಡಿದರು.…
ಬೆಳ್ತಂಗಡಿ : ಟೆಲಿಗ್ರಾಮ್ ಆ್ಯಪ್ ಮೂಲಕ 3.46 ಲಕ್ಷ ರೂ. ವಂಚನೆ – ದೂರು
Visitors have accessed this post 80 times.
ಬೆಳ್ತಂಗಡಿ: ಟೆಲಿಗ್ರಾಮ್ ಆ್ಯಪ್ ಮೂಲಕ ಬಂದ ಮೆಸೇಜ್ ನ್ನು ನಂಬಿ ವ್ಯಕ್ತಿಯೊಬ್ಬರು 3.46 ಲಕ್ಷ ರೂ. ಕಳೆದುಕೊಂಡಿದ್ದು ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ತಾಲೂಕಿನ ಓಡಿಲ್ನಾಳ ನಿವಾಸಿ…
ಕುಂಬಳೆ: ಪತ್ನಿಯ ಸೀಮಂತಕ್ಕಾಗಿ ವಿದೇಶದಿಂದ ಊರಿಗೆ ಬಂದಿದ್ದ ಯುವಕ ಬೈಕ್ ಅಪಘಾತದಲ್ಲಿ ಮೃತ್ಯು
Visitors have accessed this post 500 times.
ಕಾಸರಗೋಡು: ಎರಡು ದಿನಗಳ ಹಿಂದೆಯಷ್ಟೇ ಪತ್ನಿಯ ಸೀಮಂತ ಕಾರ್ಯಕ್ರಮಕ್ಕಾಗಿ ಕೊಲ್ಲಿಯಿಂದ ಊರಿಗೆ ಬಂದಿದ್ದ ಯುವಕ ಬೈಕ್ ಅಪಘಾತದಲ್ಲಿ ಸಾವಿಗೀಡಾದ ಘಟನೆ ನಡೆದಿದೆ. ಬಂಬ್ರಾಣ ಉಜಾರು ನಿವಾಸಿ ದಿ|ಅಮ್ಮು…