Visitors have accessed this post 605 times.

ಬಂಟ್ವಾಳ: ಕಾಂಕ್ರೀಟ್ ಕೆಲಸ ಮಾಡುತ್ತಿದ್ದ ಮೇಸ್ತ್ರಿ ಆಯತಪ್ಪಿ ಕೆಳಗೆ ಬಿದ್ದು ಸಾವು

Visitors have accessed this post 605 times.

ಬಂಟ್ವಾಳ:  ಮನೆ ನಿರ್ಮಾಣ ಕಾಮಗಾರಿ ವೇಳೆ ಮಹಡಿಯಲ್ಲಿ ಕಾಂಕ್ರೀಟ್ ಕೆಲಸ ಮಾಡುತ್ತಿದ್ದ ಮೇಸ್ತ್ರಿಯೋರ್ವರು ಆಯತಪ್ಪಿ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡು ಮೃತಪಟ್ಟ ಘಟನೆ ಬಂಟ್ವಾಳದಲ್ಲಿ ನಡೆದಿದೆ. ಮೃತರನ್ನು ಅಮ್ಟಾಡಿ ಗ್ರಾ.ಪಂ.ವ್ಯಾಪ್ತಿಯ ತಡ್ಯಾಲು ನಿವಾಸಿ, ಅಮ್ಟಾಡಿ ಗ್ರಾ.ಪಂ.ಸದಸ್ಯ ಪ್ರಕಾಶ್ ( 45) ಎಂದು ಗುರುತಿಸಲಾಗಿದೆ.

ಬಿದ್ದು ಗಂಭೀರವಾಗಿ ಗಾಯಗೊಂಡ ಅವರನ್ನು ಕೂಡಲೇ ತುಂಬೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ

ಪ್ರಕಾಶ್ ಅವರು ಬಡಾಜೆ ಎಂಬಲ್ಲಿ ಮನೆಯೊಂದರ ಎರಡನೇ ಮಹಡಿಗೆ ಇವರು ಸೇರಿ ಒಟ್ಟು ಮೂವರು ಕಾಂಕ್ರೀಟ್ ಕೆಲಸ ಮಾಡುತ್ತಿದ್ದರು. ಆದರೆ ಏಕಾಏಕಿ ಕಾಂಕ್ರೀಟ್ ಹಲಗೆಗಳು ಮತ್ತು ಜಾಕ್ ಗಳು ಮುರಿದು ಬೀಳುವುದನ್ನು ಗಮನಿಸಿ ತಕ್ಷಣ ಇಬ್ಬರು ಕೆಳಗೆ ಹಾರಿದ್ದಾರೆ. ಪ್ರಕಾಶ್ ಮಾತ್ರ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು.

ಮೂವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆಯಾದರೂ ಗಂಭೀರವಾಗಿ ಗಾಯಗೊಂಡಿದ್ದ ಪ್ರಕಾಶ್ ದಾರಿ ಮಧ್ಯೆ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.ಉಳಿದಂತೆ ಇನ್ನಿಬ್ಬರು ಕೆಲಸಗಾರರು ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ.

Leave a Reply

Your email address will not be published. Required fields are marked *