![](https://i0.wp.com/mediaonekannada.com/wp-content/uploads/2024/09/WhatsApp-Image-2024-09-24-at-7.15.49-PM.jpeg?fit=1166%2C1600&ssl=1)
ಬೆಂಗಳೂರು: ಅನಾರೋಗ್ಯದಿಂದಾಗಿ ಭೂಗತ ಪಾತಕಿ ರವಿ ಪೂಜಾರಿ ಬೆಂಗಳೂರಿನಲ್ಲಿ ಆಸ್ಪತ್ರೆಗೆ ದಾಖಲಾಗಿರುವುದಾಗಿ ತಿಳಿದು ಬಂದಿದೆ. ಹರ್ನಿಯಾ ಸಮಸ್ಯೆಯಿಂದ ಬಳಲುತ್ತಿದ್ದ ಹಿನ್ನೆಲೆ ಶಸ್ತ್ರಚಿಕಿತ್ಸೆಗಾಗಿ ಸೋಮವಾರ ವಿಕ್ಟೋರಿಯಾ ಆಸ್ಪತ್ರೆಯ ಮಲ್ಟಿಸ್ಪೆಷಾಲಿಟಿ ಘಟಕಕ್ಕೆ ದಾಖಲಾಗಿ, ಚಿಕಿತ್ಸೆ ಪಡೆಯುತ್ತಿದ್ದಾರೆ.
![](https://i0.wp.com/mediaonekannada.com/wp-content/uploads/2024/11/WhatsApp-Image-2024-11-05-at-10.49.10.jpeg?fit=1091%2C839&ssl=1)
![](https://i0.wp.com/mediaonekannada.com/wp-content/uploads/2024/11/WhatsApp-Image-2024-11-04-at-13.51.12.jpeg?fit=1200%2C1000&ssl=1)
![](https://i0.wp.com/mediaonekannada.com/wp-content/uploads/2024/10/IMG-20241029-WA0008.jpg?fit=1600%2C1191&ssl=1)
![](https://i0.wp.com/mediaonekannada.com/wp-content/uploads/2024/10/IMG-20241029-WA0009.jpg?fit=1431%2C859&ssl=1)
ಸುಮಾರು 60ಕ್ಕೂ ಹೆಚ್ಚು ಕ್ರಿಮಿನಲ್ ಕೇಸ್ಗಳಲ್ಲಿ ಭಾಗಿಯಾಗಿರುವ ರವಿ ಪೂಜಾರಿ ಮೇಲೆ ಕರ್ನಾಟಕ, ಮಹಾರಾಷ್ಟ್ರ, ಕೇರಳ ಸೇರಿ ಹಲವೆಡೆ ಕೇಸ್ ದಾಖಲಾಗಿದ್ದಾವೆ. ಈ ಪ್ರಕರಮದಲ್ಲಿ ಪೊಲೀಸರು ಬಂಧಿಸಿದ್ದರು.
ಭೂಗತವಾಗಿದ್ದುಕೊಂಡೇ ಕ್ರಿಮಿನಲ್ ಚಟುವಟಿಕೆಗಳಲ್ಲಿ ತೊಡಗಿಕೊಂಡಿರುವ ರವಿ ಪೂಜಾರಿಯನ್ನು ಅರೆಸ್ಟ್ ಮಾಡಲು ಭಾರತದ ತನಿಖಾ ಸಂಸ್ಥೆಗಳು ಸೆನೆಗಲ್ ದೇಶದೊಂದಿಗೆ ಸಂಪರ್ಕದಲ್ಲಿದ್ದವು.
ಈ ಹಿನ್ನಲೆಯಲ್ಲಿ 2019 ರಲ್ಲಿ ಸೆನೆಗಲ್ ಪೊಲೀಸರು ರವಿ ಪೂಜಾರಿಯನ್ನು ಬಂಧಿಸಲಾಗಿತ್ತು. ವಿಚಾರಣೆ ಬಳಿಕ ಪರಪ್ಪನ ಅಗ್ರಹಾರ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ.
![](https://i0.wp.com/mediaonekannada.com/wp-content/uploads/2024/10/addd.jpg?fit=720%2C1436&ssl=1)