Visitors have accessed this post 633 times.
ಬೆಂಗಳೂರು: ನಟ ದರ್ಶನ್ ಅಂಡ್ ಗ್ಯಾಂಗ್ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನವಾಗಿದ್ದು, ಆರೋಪಿಗಳನ್ನು ಇಂದೇ ನ್ಯಾಯಾಲಯಕ್ಕೆ ಹಾಜರುಪಡಿಸುವ ಸಾಧ್ಯತೆ ಇದೆ. ಮಧ್ಯಾಹ್ನದ ವೇಳೆಗೆ ಅವರು ನ್ಯಾಯಾಲಯದ ಮುಂದೆ ಹಾಜರುಪಡಿಸೋ ಸಾಧ್ಯತೆಯಿದೆ. ಆರೋಪಿಗಳ ವಿಚಾರಣೆ ಮತ್ತು ಸ್ಥಳ ಮಹಜರು ಮುಕ್ತಾಯವಾಗಿದೆ. ನಾಳೆ ಭಾನುವಾರವಾದ ಕಾರಣ, ಓಪನ್ ಕೋರ್ಟ್ನಲ್ಲಿ ನ್ಯಾಯಾಧೀಶರ ಎದುರು ಆರೋಪಿಗಳನ್ನು ಹಾಜರುಪಡಿಸುವ ಸಾಧ್ಯತೆ ಇದೆ. ದರ್ಶನ್ ಮತ್ತು ಅವರ ಗ್ಯಾಂಗ್ ಜೈಲು ಸೇರುವ ಸಾಧ್ಯತೆಯಿದೆ. ಜೂನ್ 11ರಂದು, ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ, ಪೊಲೀಸರ ಕಸ್ಟಡಿಗೆ ನೀಡಲಾಗಿತ್ತು. ಈ ಕುರಿತು ಹೆಚ್ಚಿನ ಮಾಹಿತಿಯನ್ನು ಪೊಲೀಸರಿಂದಲೇ ತಿಳಿದುಕೊಳ್ಳಲಾಗಿದೆ