January 17, 2026

Media One Kannada

ಸುಬ್ರಹ್ಮಣ್ಯ: ಅತ್ಯುತ್ತಮ ಸೇವೆ ಸಲ್ಲಿಸಿದವರಿಗೆ ರಾಜ್ಯ ಸರ್ಕಾರ ನೀಡುವ ಮುಖ್ಯಮಂತ್ರಿ ಪದಕ ಸುಬ್ರಹ್ಮಣ್ಯ ವಲಯದ ಉಪವಲಯಾರಣ್ಯಾಧಿಕಾರಿ ಸಂತೋಷ್ ಶಿವಪ್ಪ ದಮ್ಮಸೂ‌ರು ಆಯ್ಕೆಯಾಗಿದ್ದಾರೆ.  ಸೆ.29 ರಂದು ಬೆಂಗಳೂರಿನ ವಿಧಾನ ಸೌದದ ಬ್ಲಾಕೆಂಟ್ ಹಾಲ್ ನಲ್ಲಿ ನಡೆದ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ  ಪದಕ ಪ್ರಧಾನ ಮಾಡಲಾಯಿತು. ಕರ್ತವ್ಯ ಸಮಯದಲ್ಲಿ ಜಾತಿವಾರು ಸಸಿಗಳ ಸಂಖ್ಯೆಯಲ್ಲಿ ಕೆಲಜಾತಿಯ ಸಸಿಗಳು ವಿರಳವಾಗಿರುವುದನ್ನು ಗಮನಿಸಿ ಅವುಗಳ ಸಾಂದ್ರತೆಯನ್ನು ಹೆಚ್ಚಿಸುವ ಸಲುವಾಗಿ ಅವುಗಳ ಬೀಜಗಳನ್ನು ಹಾಗೂ ಕಾಡು ಸಸಿಗಳನ್ನು ಸ್ವ ಇಚ್ಚೆಯಿಂದ ತಂದು ಸಸ್ಯ ಕ್ಷೇತ್ರದಲ್ಲಿ ಪೋಷಿಸಿದ್ದರು.  ಅಭಿವೃದ್ದಿಪಡಿಸಿದ ನೆಡುತೋಪುಗಳಲ್ಲಿ ನೆಟ್ಟುಪೋಷಣೆ ಮಾಡಿ ಸದರಿ ಜಾತಿಯ ಸಸಿಗಳ ಸಂಶೋಧನೆ ಮತ್ತು ಸಂಖ್ಯೆ ಹೆಚ್ಚಿಸುವಲ್ಲಿ ಗಮನಾರ್ಹ ಸಾಧನೆಯನ್ನು ಪರಿಗಣಿಸಿ ಮುಖ್ಯಮಂತ್ರಿ ಪದಕ ಆಯ್ಕೆಗೆ ಪರಿಗಣಿಸಲಾಗಿದೆ ಎಂದು ತಿಳಿದು ಬಂದಿದೆ.  ಮೂಲತ: ಸವದತ್ತಿ ತಾಲ್ಲೂಕಿನ ಹಾರುಗೊಪ್ಪ ಗ್ರಾಮದವರಾದ ಇವರು  2009ರಲ್ಲಿ ಉಪ್ಪಿನಂಗಡಿ ವಲಯದ ಶಿರಾಡಿಯಲ್ಲಿ ಅರಣ್ಯ ರಕ್ಷಕರಾಗಿ ಕೆಲಸಕ್ಕೆ ಸೇರಿದ್ದರು.  2013ರಲ್ಲಿ ಪಂಜ ವಲಯಕ್ಕೆ ವರ್ಗಾವಣೆ ಗೊಂಡೂ ಬಳಿಕ 2000 ರಲ್ಲಿ  ಉಪ ಅರಣ್ಯಾಧಿಕಾರಿಯಾಗಿ ಬಡ್ತಿ ಗೊಂಡು 2021ರಲ್ಲಿ ಸುಬ್ರಹ್ಮಣ್ಯ ವಲಯದ ನೆಟ್ಟಣದ ಕೇಂದ್ರೀಯ ಮರಗಳ ಸಂಗ್ರಹಾಲಯದಲ್ಲಿ ಕರ್ತವ್ಯದಲ್ಲಿದ್ದಾರೆ.
ಬೆಂಗಳೂರು: ಇಂದು ವಿಶ್ವ ಹಿರಿಯ ನಾಗರಿಕರ ದಿನಾಚರಣೆಯ ಅಂಗವಾಗಿ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ, ಸಚಿವೆ...
ಉಪ್ಪಿನಂಗಡಿ: ಇಲ್ಲಿಗೆ ಸಮೀಪದ ಕೊಣಾಲು ಗ್ರಾಮದ ಪಾಂಡಿಬೆಟ್ಟು ಮನೆ ನಿವಾಸಿ, ಎಂಡೋ ಸಂತ್ರಸ್ತನಾಗಿದ್ದ ಹೃತಿಕ್ ಎಂಬ ಹನ್ನೆರಡು ವರ್ಷದ...
ನವದೆಹಲಿ: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಭಾನುವಾರ 209 ರೂ.ಗಳಷ್ಟು ಹೆಚ್ಚಿಸಲಾಗಿದೆ. ತೈಲ ಕಂಪನಿಗಳು 19 ಕೆಜಿ ವಾಣಿಜ್ಯ...
ಬೆಂಗಳೂರು: ಮುಖ್ಯ‌ಮಂತ್ರಿಯಾಗಿ ನನ್ನ ಅವಧಿ ಮುಗಿಯುವ ಮುನ್ನ ಮುಸ್ಲಿಮರ ಅಭಿವೃದ್ಧಿ ಅನುದಾನವನನ್ನು 10 ಸಾವಿರ ಕೋಟಿಗೆ ಹೆಚ್ಚಿಸಲಿದ್ದೇನೆ ಎಂದು...
ಮಂಗಳೂರು;ಹರೇಕಳ‌ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ದ.ಕ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘ,ಉಳ್ಳಾಲ ತಾಲೂಕು ಪತ್ರಕರ್ತರ ಸಂಘ, ದ.ಕ....
ಪುತ್ತೂರು: ಪ್ರವಾಸಕ್ಕೆ ತೆರಳಿದ ವೇಳೆ ಯುವಕನೋರ್ವ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ನಡೆದಿದೆ. ಪುತ್ತೂರು ಸಮೀಪದ ಹಿರೇಬಂಡಾಡಿ ಅಡೆಕ್ಕಲ್ ನಿವಾಸಿ...
 ಕೊಳ್ಳೇಗಾಲ ಉಪವಿಭಾಗದ ಆಸ್ಪತ್ರೆಯಲ್ಲಿ ಅರಿವಳಿಕೆ ವಿಭಾಗದಲ್ಲಿ ಸೇವೆ ಸಲ್ಲಿಸುತ್ತಿದ್ದ 28 ವರ್ಷದ ವೈದ್ಯೆ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದಾರೆ. ಚೆನ್ನೈ...